HEALTH TIPS

No title

                      ಕುಳೂರು ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ
     ಮಂಜೇಶ್ವರ:  ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಮಂಗಳೂರು, ಶಾಲಾ ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ಹಳೆ ವಿದ್ಯಾಥರ್ಿ ಸಂಘದ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ಭಾನುವಾರ ನಡೆಯಿತು.
   ವೈದ್ಯಕೀಯ ಶಿಬಿರದ ಉದ್ಘಾಟನೆಯನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವಸ್ಥಾನದ ಅಧ್ಯಕ್ಷರಾದ ಡಾ.ಶ್ರೀಧರ ಭಟ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ.ಪಿ. ಹೈಲ್ಯಾಂಡ್ ಆಸ್ಪತ್ರೆಯ ನಿದರ್ೇಶಕರಾದ ಡಾ.ಅಬ್ದುಲ್ಲ ಯಾಸಿರ್, ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ಯೂನಸ್, ವೈದ್ಯರುಗಳಾದ ಡಾ.ಅಹ್ಮದ್ ರಿಝ್ವಾನ್, ಡಾ.ಶಿಹಾಬ್ ಹಸನ್, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ, ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು ಉಪಸ್ಥಿತರಿದ್ದರು. ಹಳೆ ವಿದ್ಯಾಥರ್ಿ ಸಂಘದ ಸದಸ್ಯ ಅಭಿಜಿತ್ ಶೆಟ್ಟಿ ಕೊಂಡಾಣ ಸ್ವಾಗತಿಸಿ, ಜೊತೆ ಕಾರ್ಯದಶರ್ಿ ವಸಂತ ಪೂಜಾರಿ ಕುಳೂರು ವಂದಿಸಿದರು. ಶಿಕ್ಷಕಿ ರೇಷ್ಮಾ ಕುಬಣೂರು ಕಾರ್ಯಕ್ರಮ ನಿರೂಪಿಸಿದರು.
   ಬಳಿಕ ಹಲ್ಲು, ಎಲುಬು, ಹೃದಯ, ಮಧುಮೇಹ, ಕಣ್ಣು, ಮೂಗು, ಗಂಟಲು ಹಾಗೂ ಜನರಲ್ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆ ನಡೆಸಲಾಯಿತು. ನಾರಾಯಣ ನಾಕ್ ನಡುಹಿತ್ಲು, ಚಿಕ್ಕಪ್ಪ ಶೆಟ್ಟಿ ಎಲಿಯಾಣ ಜಯರಾಜ್ ಶೆಟ್ಟಿ ಚಾರ್ಲ, ಅಬ್ದುಲ್ ಮಜೀದ್ ಸಾಹೇಬ್, ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ, ಶಿಕ್ಷಕಿಯರಾದ ಸೌಮ್ಯಾ ಪಿ. ಶ್ವೇತಾ ಎಲಿಯಾಣ ಉಪಸ್ಥಿತರಿದ್ದು ಸಹಕರಿಸಿದರು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries