HEALTH TIPS

No title

          ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕುಕೃತ್ಯ= ಸರ್ವಪಕ್ಷ ಸಭೆಯಲ್ಲಿ ಪೊಲೀಸರ ವಿರುದ್ದ ಕಿಡಿಕಾರಿದ ಸಿಪಿಎಂ

   ಕಾಸರಗೋಡು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊಲೆ, ಕಳವು, ಸುಲಿಗೆಗಳು ಸಾಮಾನ್ಯ ಜನಜೀವನವನ್ನು ತಲ್ಲಣಗೊಳಿಸಿದ ಹಿನ್ನೆಲೆಯಲ್ಲಿ ಕಾಸರಗೋಡು ಪೊಲೀಸ್ ವರೀಷ್ಟಾಧಿಕಾರಿ ಕರೆದ ಸರ್ವಪಕ್ಷ ಸಭೆಯಲ್ಲಿ ಯಾವುದೇ ಪ್ರಕರಣವನ್ನು ಭೇದಿಸಲು ಸಾಧ್ಯವಾಗದ ಪೊಲೀಸರ ಕ್ರಮದ ವಿರುದ್ದ ಸಿಪಿಎಂ ಜಿಲ್ಲಾಧ್ಯಕ್ಷ ಸಹಿತ ಪಕ್ಷದ ಜವಾಬ್ದಾರಿಯುಳ್ಳ ಇತರರು ಪೊಲೀಸರ ವಿರುದ್ದ ಕಿಡಿಕಾರಿದ್ದಾರೆ.
  ಈ ಸಂದರ್ಭ ಎಚ್ಚೆತ್ತುಗೊಂಡ ಪೊಲೀಸ್ ಉನ್ನತ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಇದಕ್ಕೊಂದು ಪರಿಹಾರವನ್ನು ಕಂಡು ಕೊಳ್ಳುವುದಾಗಿ ಭರವಸೆಯನ್ನು ನೀಡಿದ್ದಾರೆ.
  ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಕೂಡಲೇ ಪತ್ತ ಹಚ್ಚಿ ಜೈಲಿಗಟ್ಟುವುದಾಗಿ ಪೊಲೀಸ್ ಅಧಿಕಾರಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯವನ್ನು ಆಳುತ್ತಿರುವ ಸಿಪಿಎಂ ಪಕ್ಷದ ಕರ್ಯಕರ್ತರು ಅಲ್ಪ ತಲ್ಲಣಗೊಂಡರು.
  ಕಳವು , ಸುಲಿಗೆ ಹಾಗೂ ಕೊಲೆಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಲು ಜಿಲ್ಲೆಯಲ್ಲಿ ಉನ್ನತ ಅಧಿಕಾರಿಗಳನ್ನೊಳಗೊಂಡ ಒಂದು ತಂಡವನ್ನು ರಚಿಸುವುದಾಗಿಯೂ ಅವರು ಸರ್ವಪಕ್ಷ ಸಭೆಯಲ್ಲಿ ತಿಳಿಸಿದರು.
  ಸರ್ವಪಕ್ಷ ಸಭೆಯಲ್ಲಿ ಬಹುತೇಕ ಪಕ್ಷಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರೂ ಸಿಪಿಐ ಪಕ್ಷದ ಜನಪ್ರತಿನಿಧಿಗಳು ಯಾರೂ ಪಾಲ್ಗೊಂಡಿಲ್ಲವೆಂದು ತಿಳಿದುಬಂದಿದೆ 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries