HEALTH TIPS

ಯಾವುದೇ ಶೀರ್ಷಿಕೆಯಿಲ್ಲ

 ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ಶಿಬಿರ
     ಮಂಜೇಶ್ವರ:  ನವಶಕ್ತಿ ಫ್ರೆಂಡ್ಸ್ ಸರ್ಕಲ್ ತೂಮಿನಾಡು ಹಾಗೂ ನೆಹರೂ ಯುವ ಕೇಂದ್ರ ಕಾಸರಗೋಡು ಇವರ ಆಶ್ರಯದಲ್ಲಿ  ಯೇನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇವರ ಸಹಯೋಗದೊಂದಿಗೆ 37 ನೇ ವಾಷರ್ಿಕೋತ್ಸವದ ಪ್ರಯುಕ್ತ ಮಾ. 11 ರಂದು ಭಾನುವಾರ ಕುಂಜತ್ತೂರು ಜಿ ವಿ ಎಚ್ ಎಸ್ ಎಸ್ ನಲ್ಲಿ ಉಚಿತ ರಕ್ತದಾನ ಶಿಬಿರ ಹಾಗೂ ವೈದ್ಯಕೀಯ ಶಿಬಿರ ನಡೆಯಲಿದೆ.
   ಇ ಎನ್ ಟಿ ವಿಭಾಗ, ಜನರಲ್ ಮೆಡಿಸಿನ್, ಮಕ್ಕಳ ವಿಭಾಗ, ನೇತ್ರ ತಪಾಸಣೆ, ಎಲುಬು ಮತ್ತು ಕೀಲು ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ ಗಳ ಶಿಬಿರ ನಡೆಯಲಿದೆ.
   ಬೆಳಿಗ್ಗೆ 9.30 ರಿಂದ ಮದ್ಯಾಹ್ನ 1 ರ ವರೆಗೆ ಶಿಬಿರ ನಡೆಯಲಿದೆ. ಕೃಷ್ಣಾ ಶಿವ ಕೃಪಾ ಕುಂಜತ್ತೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಿಬಿರವನ್ನು ಡಾ. ಜಯಪಾಲ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೈದ್ಯರುಗಳಾದ ಖಾದರ್ ಎ, ಅಬ್ದುಲ್ ಮನ್ಸೂರ್, ದೀಪ್ತಿ ರಾಣಿ ಎನ್, ಮುಖಂಡರಾದ ಹರೀಶ್ ಶೆಟ್ಟಿ ಮಾಡ ಹಾಗೂ ಆನಂದ ಮಾಸ್ಟರ್ ತೂಮಿನಾಡು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ಸಂಬಂಧಪಟ್ಟವರು ತಿಳಿಸಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries