HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                 ಕೊಡಿಮಾರು ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನ
     ಉಪ್ಪಳ: ಕೊಡಿಮಾರು ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವಿವಿಧ ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಾನುವಾರ ಸಂಪನ್ನಗೊಂಡಿತು.
    ಕಾರ್ಯಕ್ರಮದಂಗವಾಗಿ ಬಾಳಿಯೂರು ಶ್ರೀ ಅಯ್ಯಪ್ಪ ಭಜನಾ ಮಂದಿರದಿಂದ ಹೊರೆಕಾಣಿಕೆ ಮೆರವಣಿಗೆ, ಆ ಬಳಿಕ ವೈವಿಧ್ಯಮಯ ಕಾರ್ಯಕ್ರಮ ಜರಗಿತು. ತಂತ್ರಿವರ್ಯ ರಾಮ ಪ್ರಸಾದ್ ನಲ್ಲೂರಾಯ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ಉತ್ಸವದ ಅಂಗವಾಗಿ ಅನ್ನಸಂತರ್ಪಣೆ, ಸದಾಶಿವ ಶೆಟ್ಟಿ ಕನ್ಯಾನ ಅವರ ಅಧ್ಯಕ್ಷತೆಯಲ್ಲಿ ಧಾಮರ್ಿಕ ಸಭೆ ಜರಗಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ತಂತ್ರಿವರ್ಯರನ್ನು ಗೌರವಿಸಲಾಯಿತು.
   ಯಕ್ಷಗಾನ ಬಯಲಾಟ, ಶ್ರೀ ನಾಗದೇವರು, ಶ್ರೀ ರಕ್ತೇಶ್ವರಿ, ಗುಳಿಗ ದೈವಗಳ ಪ್ರತಿಷ್ಠೆ, ನಾಗದರ್ಶನ ಶನಿಪೂಜೆ, ರಂಗಪೂಜೆ ನೆರವೇರಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ವಿದ್ಯಾಲಕ್ಷ್ಮಿ ಕುಂಬಳೆ ಅವರ ಶಿಷ್ಯೆಯರಿಂದ ನೃತ್ಯ ವೈಭವ ಜರಗಿತು.
 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries