HEALTH TIPS

ಯಾವುದೇ ಶೀರ್ಷಿಕೆಯಿಲ್ಲ

         ಏ.26-30 : ಪುನರ್ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ
     ಉಪ್ಪಳ: ಉಪ್ಪಳ ನಡುಮನೆ ನಾಗದೇವ, ಮಹಾಮಲರಾಯ, ಬಂಟ ಹಾಗೂ ಪರಿವಾರ ದೈವಗಳ ಪುನರ್ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಎ.26 ರಿಂದ 30 ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
   ಎ.26 ರಂದು ಅಪರಾಹ್ನ 3 ರಿಂದ ತಂತ್ರಿಗಳ ಆಗಮನ ಪೂರ್ಣಕುಂಭ ಸ್ವಾಗತ, ಸಂಜೆ 5 ರಿಂದ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ವಾಚನ, ಸಪ್ತಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಬಲಿ, ವಾಸ್ತು ಹೋಮ, ದಿಕ್ಪಾಲ ಬಲಿ, ನಾಗ ಬಿಂಬಾಧಿವಾಸ, ಕಲಶಾಧಿವಾಸ(ನಾಗಕಟ್ಟೆಯಲ್ಲಿ), ರಾತ್ರಿ 8 ರಿಂದ ತರವಾಡು ಮನೆಯಲ್ಲಿ ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ವಾಸ್ತು ಪೂಜೆ, ಪ್ರಾಕಾರ ಬಲಿ, ದೈವಗಳ ಪೀಠ, ಅಧಿವಾಸ, ಕಲಶಾಧಿವಾಸ, ಅಧಿವಾಸ ಹೋಮ, 27 ರಂದು ಬೆಳಗ್ಗೆ 7 ರಿಂದ ಗಣಪತಿ ಹೋಮ, 7.56 ಕ್ಕೆ ತರವಾಡು ಮನೆ ಗೃಹಪ್ರವೇಶ, 9.26 ರಿಂದ ನಾಗದೇವರ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಆಶ್ಲೇಷ ಬಲಿ, ತರವಾಡು ಮನೆ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
    ಎ.29 ರಂದು ಸಂಜೆ 6 ರಿಂದ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹವಾಚನ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ವಾಸ್ತು ಬಲಿ, ಪ್ರಾಕಾರ ಬಲಿ, ಶ್ರೀ ಮಹಾಮಲರಾಯಿ ಬಂಟದೈವಗಳ ಪೀಠ ಅಧಿವಾಸ, ಕಲಶಾಧಿವಾಸ, ಅಧಿವಾಸ ಹೋಮ, ಎ.30 ರಂದು ಪ್ರಾತ:ಕಾಲ 2.50 ರಿಂದ ಶ್ರೀ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಗಣಪತಿ ಹೋಮ, ಪರ್ವ, ಪ್ರಸಾದ ವಿತರಣೆ, ಮಧ್ಯಾಹ್ನ 12 ರಿಂದ ಮಹಾ ಅನ್ನಸಂತರ್ಪಣೆ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries