HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ವಿದ್ಯಾಪೀಠದಲ್ಲಿ  ಸಂಭ್ರಮದ ಪ್ರವೇಶೋತ್ಸವ
    ಬದಿಯಡ್ಕ : ಬದಿಯಡ್ಕ ಶ್ರೀಭಾರತೀ ವಿದ್ಯಾಪೀಠದ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಶುಕ್ರವಾರ ಸಂಭ್ರಮ ಸಡಗರದಿಂದ ನಡೆಯಿತು. ಈ ಸಂದರ್ಭ ಹಿರಿಯ ವಿದ್ಯಾಥರ್ಿಗಳು ಕಿರಿಯ ವಿದ್ಯಾಥರ್ಿಗಳಿಗೆ ಚಪ್ಪಾಳೆಯ ಮೂಲಕ ಪ್ರೋತ್ಸಾಹವನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಈಶ್ವರ ಭಟ್ ಹಳೆಮನೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನೂತನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಅನೇಕ ಚಟುವಟಿಕೆಗಳನ್ನು ನಡೆಸಲು ತೀಮರ್ಾನಿಸಲಾಗಿದೆ. ಅಚ್ಚುಕಟ್ಟಾದ ಪರಿಸರ, ಮೂಲಭೂತ ಸೌಕರ್ಯಗಳೇ ಮೊದಲಾದವುಗಳನ್ನು ಉನ್ನತಮಟ್ಟಕ್ಕೇರಿಸಲಾಗಿದ್ದು, ಮುಳ್ಳೇರಿಯ ಭಾಗಕ್ಕೆ ನೂತನ ಶಾಲಾ ವಾಹನದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಶಾಲೆಯ, ಮಕ್ಕಳ ಕುರಿತಾದ ಏನಾದರೂ ಸಮಸ್ಯೆಗಳಿದ್ದಲ್ಲಿ ಮುಕ್ತವಾಗಿ ಆಡಳಿತ ಸಮಿತಿಯೊಂದಿಗೆ ಹಂಚಿಕೊಳ್ಳಬಹುದು ಎಂದು ತಿಳಿಸಿದರು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಲೀಲಾವತಿ ಕನಕಪ್ಪಾಡಿ ಉದ್ಘಾಟಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯನ್ನು ಮೇಳೈಸಿಕೊಂಡಿರುವ ಆಧುನಿಕ ತಂತ್ರಜ್ಞಾನದ ಜೊತೆಗಿನ ಅತ್ಯುತ್ತಮ ಶಿಕ್ಷಣವನ್ನು ನೀಡುವ ಇಂತಹ ಶಾಲೆಗಳಿಂದ ಮುಂದಿನ ತಲೆಮಾರಿನ ಉತ್ತಮ ಸಮಾಜದ ಸೃಷ್ಟಿಯಾಗುತ್ತದೆ ಎಂದರು. ಆಡಳಿತ ಸಮಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ಕೆರೆಮೂಲೆ ಶುಭಾಶಂಸನೆಗೈದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಥರ್ಿ ಮಂಜೇಶ್ ಎ. ಸ್ವಾಗತಿಸಿ, ನಿತೀಶ್ ಕೆ. ವಂದಿಸಿದರು. ಸ್ನೇಹಶ್ರೀ ಪಿ. ಕಾರ್ಯಕ್ರಮ ನಿರೂಪಣೆಗೈದಳು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries