HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                       ಅಗಲ್ಪಾಡಿ ಶಾಲಾ ಪ್ರವೇಶೋತ್ಸವ
    ಬದಿಯಡ್ಕ: ಶ್ರೀ ಅನ್ನಪೂಣರ್ೇಶ್ವರಿ ಪ್ರೌಢ ಶಾಲೆ ಅಗಲ್ಪಾಡಿಯಲ್ಲಿ 2018-19 ನೇ ವರ್ಷದ ಪ್ರವೇಶೋತ್ಸವ ನಡೆಯಿತು.
     ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಭಾಕರ ರೈ ಗೋಸಾಡ ವಹಿಸಿದ್ದರು. ಅವರು ಮಾತನಾಡಿ ಶಾಲೆಗೆ ಹೊಸದಾಗಿ ಪ್ರವೇಶಾತಿ ಪಡೆದ ಮಕ್ಕಳನ್ನು ಸ್ವಾಗತಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಧ್ಯಾಪಕರಾದ ಶ್ರೀಹರಿ ಭಟ್ ಅವರು 2017-18 ನೇ ಸಾಲಿನ ಎಸ್ಎಸ್ಎಲ್ಸಿ ಯಲ್ಲಿ ಶೇ.100 ಫಲಿತಾಂಶ ಹಾಗೂ ಹದಿಮೂರು ಮಂದಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದ ವಿದ್ಯಾಥರ್ಿಗಳನ್ನು ಅಭಿನಂದಿಸುತ್ತಾ ಪ್ರಸ್ತುತ ವರ್ಷದಲ್ಲಿಯೂ ಕೂಡ ಇದಕ್ಕಿಂತ ಹೆಚ್ಚಿನ ಸಾಧನೆಯನ್ನು ಮಾಡಬೇಕೆಂದು ವಿದ್ಯಾಥರ್ಿಗಳಿಗೆ ಕರೆಕೊಟ್ಟರು.
   ಶಾಲಾ ವ್ಯವಸ್ಥಾಪಕ ನಾರಾಯಣ ಶರ್ಮ ಬಳ್ಳಪದವು ಅವರು ಮಾತನಾಡಿ ಪ್ರಸ್ತುತ ವರ್ಷದಲ್ಲಿ ಇನ್ನೂ ಹೆಚ್ಚು ಕಠಿಣ ಪರಿಶ್ರಮದಿಂದ ಶಾಲೆಗೆ ಒಳ್ಳೆಯ ಫಲಿತಾಂಶವನ್ನು ತರಬೇಕೆಂದು ವಿದ್ಯಾಥರ್ಿಗಳಿಗೆ ಶುಭಹಾರೈಸಿದರು.
   ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಎನ್. ಉಪಸ್ಥಿತರಿದ್ದು, ಸ್ವಾಗತಿಸಿದರು. ಅವರು ವಿದ್ಯಾಥರ್ಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಸ್ಥಳೀಯ ಪಂಚಾಯತ್ ಸದಸ್ಯರಾದ ಶಾಂತಾ ಎಸ್.ಭಟ್ ಮಕ್ಕಳನ್ನು ಸ್ವಾಗತಿಸಿ ಶುಭಹಾರೈಸಿದರು. ಅಧ್ಯಾಪಿಕೆ ಅಪಣರ್ಾ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ನೌಕರ ಸಂಘದ ಕಾರ್ಯದಶರ್ಿ ರಾಧಾ ಮಾಧವ ವಂದಿಸಿದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries