HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                     ಪರಿಸರ ಸಂರಕ್ಷಣೆಯ ಜನಜಾಗೃತಿ ಮೂಡಿಸಿ
      ಮುಳ್ಳೇರಿಯ: ಪರಿಸರ ಸಂರಕ್ಷಣೆಗಾಗಿ ಯುವಜನಾಂಗ ಕಟಿಬದ್ಧರಾಗಬೇಕು. ಪ್ಲಾಸ್ಟಿಕ್ ಮುಕ್ತ ಸಮಾಜದ ನಿಮರ್ಾಣವಾಗಬೇಕು. ನಮ್ಮ ಪರಿಸರದಲ್ಲಿ ವೃಕ್ಷಗಳನ್ನು ನೆಟ್ಟು ಬೆಳೆಸುವುದರೊಂದಿಗೆ ಸಮಾಜದಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ವಿದ್ಯಾಥರ್ಿಗಳು ಮೂಡಿಸಬೇಕು ಎಂದು ಮುಳಿಯಾರು ಕೃಷಿ ಭವನದ ಕೃಷಿ ಅಧಿಕಾರಿ ಬೈಜು ಅವರು ಹೇಳಿದರು.
     ಅವರು ಬೋವಿಕ್ಕಾನ ಬಿ.ಎ.ಆರ್. ಹೈಯರ್ ಸೆಕೆಂಡರಿ ಶಾಲೆಯಲ್ಲಿ ಎನ್.ಎಸ್.ಎಸ್. ಹಾಗೂ ಶಾಲಾ ಇಕೋ ಕ್ಲಬ್ ನೇತೃತ್ವದಲ್ಲಿ ಜೂನ್ 5ರಂದು ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ಬಿ.ಮೊಹಮ್ಮದ್ ಕುಂಞಿ ಅವರು ವಹಿಸಿದ್ದರು. ಪರಿಸರ ತಜ್ಞ ವೇಣುಗೋಪಾಲ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಾಹಿತಿಯನ್ನು ನೀಡಿದರು. ಹಮೀದ್ ಕೊಳಿಯಡ್ಕಂ, ಮಾತೃಸಂಘದ ಅಧ್ಯಕ್ಷೆ ಸುಹರ, ಹಂಸ ಆಲೂರ್, ಮಣಿಕಂಟನ್ ಮಾಸ್ಟರ್, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೀತಮ್ ಎ.ಕೆ. ಶುಭಾಶಂಸನೆಗೈದರು. ಪ್ರಾಂಶುಪಾಲ ಮೆಜೋ ಜೋಸೆಫ್ ಅವರು ಸ್ವಾಗತಿಸಿ, ಮುಖ್ಯೋಪಾಧ್ಯಾಯ ಅರವಿಂದಾಕ್ಷ ನಂಬಿಯಾರ್ ಅವರು ವಂದಿಸಿದರು. ಎನ್.ಎಸ್.ಎಸ್. ವಿದ್ಯಾಥರ್ಿಗಳು ಪ್ರಾರ್ಥನೆಯನ್ನು ಹಾಡಿದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries