HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಸಿ.ಕೆ.ಚಿಪ್ಪಾರ್ ಸಂಸ್ಮರಣೆ-ಉಚಿತ ಆರೋಗ್ಯ ಹಾಗೂ ದಂತ ಚಿಕಿತ್ಸಾ ಶಿಬಿರ ಇಂದು
  ಉಪ್ಪಳ: ಪೈವಳಿಕೆ ಕಾಯರ್ಕಟ್ಟೆ ಲಾಲ್ಬಾಘ್ನ ಸುಭಾಷ್ ಫ್ರೆಂಡ್ಸ್ ಸರ್ಕಲ್ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೈವಳಿಕೆ ವಲಯದ ನೇತೃತ್ವದಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ದಿ.ಸಿ.ಕೆ.ಚಿಪ್ಪಾರ್ ರವರ 7ನೇ ಸಂಸ್ಮರಣಾರ್ಥ ಇಂದು(ಶನಿವಾರ) ಬೆಳಿಗ್ಗೆ 9.30 ರಿಂದ 12.30ರ ವರೆಗೆ ಲಾಲ್ಬಾಘ್ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ.
   ಶಿಬಿರವನ್ನು ಉದ್ಯಮಿ ಬಿ.ಸತೀಶ್ ಪೈ ಕಾಸರಗೋಡು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಕಂದಾಯ ಸಚಿವ ಇ.ಚಂದ್ರಶೇಖರನ್ ಉದ್ಘಾಟಿಸುವರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾಸರಗೋಡು-ದಕ್ಷಿಣ ಕನ್ನಡ ವಲಯ ನಿದರ್ೇಶಕ ಚಂದ್ರಶೇಖರ ನೆಲ್ಯಾಡಿ, ಕೇರಳ ತೋಟಗಾರಿಕಾ ನಿಗಮದ ಸದಸ್ಯ ಬಿ.ವಿ.ರಾಜನ್, ಕಂಬಳ ಸಮಿತಿಯ ದ.ಕ, ಉಡುಪಿ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ ಪೊಯ್ಯೆಲು, ಅಂಬಾರು ಶ್ರೀಸದಾಶಿವ ಕ್ಷೇತ್ರದ ಮೊಕ್ತೇಸರ ಕೃಷ್ಣಪ್ಪ ಪೂಜಾರಿ ದೇರಂಬಳ, ಬಾಯಿಕಟ್ಟೆ ಶ್ರೀಅಯ್ಯಪ್ಪ ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀರಾಮ ಮೂಡಿತ್ತಾಯ, ಹಿರಿಯ ವೈದ್ಯ ಡಾ,ಕೃಷ್ಣಮೂತರ್ಿ ಅಮೈ, ಇವಿಷನ್ ಕಾಸರಗೋಡು ಇದರ ನಿದರ್ೇಶಕ ಖಯ್ಯೂಮ್ ಮಾನ್ಯ, ಕಾಟುಕುಕ್ಕೆಯ ಸತ್ಯಸಾಯೀ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಖಂಡೇರಿ, ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯದಶರ್ಿ ಅಹಮ್ಮದ್ ಹುಸೈನ್ ಮಾಸ್ತರ್, ಕುಲಾಲ ಮಂದಿರದ ಅಧ್ಯಕ್ಷ ಪೂವಪ್ಪ ಮುನ್ನಿಪ್ಪಾಡಿ, ಸಾಮಾಜಿಕ ನೇತಾರ ಲಾರೆನ್ಸ್ ಡಿಸೋಜಾ, ಅನಿಲ್ ಶೆಟ್ಟಿ ಬೋಳಂಗಳ ಉಪಸ್ಥಿತರಿದ್ದು ಶುಭಹಾರೈಸುವರು. ಶಿಬಿರದಲ್ಲಿ ನುರಿತ ವೈದ್ಯರು ತಪಾಸಣೆ ನಡೆಸಲಿದ್ದು ಸಾರ್ವಜನಿಕರು ಹೆಚ್ಚಿನ ಪ್ರಯೋಜನ ಪಡೆಯಬಹುದೆಂದು ಸಂಘಟಕರು ತಿಳಿಸಿದ್ದಾರೆ.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries