HEALTH TIPS

No title

                    ಜನಾರ್ಧನ ಪ್ರತಾಪನಗರ ಸ್ಮರಣಾರ್ಥ ರಕ್ತದಾನ ಶಿಬಿರ ಇಂದು
     ಉಪ್ಪಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಸಹಕಾರ್ಯರಾಗಿದ್ದುಕೊಂಡು ಹಲವಾರು ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದ್ದ ದಿ.ಜನಾರ್ಧನ ಪ್ರತಾಪನಗರ ಇವರ ಸ್ಮರಣಾರ್ಥ ಸೇವಾ ಭಾರತಿ ಮಂಗಲ್ಪಾಡಿ ಇದರ ವತಿಯಿಂದ ಎ.ಜೆ.ಆಸ್ಪತ್ರೆ ಕುಂಟಿಕಾನ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಗುಂಪು ನಿರ್ಣಯ ಮತ್ತು ಆರೋಗ್ಯ ಮಾಹಿತಿ ಶಿಬಿರ ಜು.29 ರಂದು ಭಾನುವಾರ  ಬೆಳಿಗ್ಗೆ 9.30 ರಿಂದ ಐಲ ಶ್ರೀ ದುಗರ್ಾಪರಮೇಶ್ವರಿ ಕಲಾ ಭವನದಲ್ಲಿ ನಡೆಯಲಿದೆ.
    ಆ ಪ್ರಯುಕ್ತ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೇರೂರು ಶಂಕರ ಆಳ್ವ ಮೆಮೋರಿಯಲ್ ಚಾರೀಟೇಬಲ್ ಸೊಸೈಟಿ ಮಂಗಲ್ಪಾಡಿ ಇದರ ಅಧ್ಯಕ್ಷ ಕೃಷ್ಣ ಪಿ.ಬಂದ್ಯೋಡು ವಹಿಸುವರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಮಧ್ಯ ಕ್ಷೇತ್ರಿಯ  ಕಾರ್ಯಕಾರಿಣಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಐಲ ಶ್ರೀ ದುಗರ್ಾಪರಮೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ನಾರಾಯಣ ಹೆಗ್ಡೆ ಕೋಡಿಬೈಲು, ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಅರವಿಂದ್, ಮಕ್ಕಳ ತಜ್ಞ ಡಾ.ಜಿತೇಂದ್ರ ರೈ ಉಪಸ್ಥಿತರಿರುವರು.
   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries