HEALTH TIPS

ಯಾವುದೇ ಶೀರ್ಷಿಕೆಯಿಲ್ಲ

            ಬಾಲೋತ್ಸವ 2018-ಆ.5 ರಂದು
  ಮಂಜೇಶ್ವರ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ನ ಬಾಲ ವೇದಿಕೆ ವಿಭಾಗದ ಆಶ್ರಯದಲ್ಲಿ ಬಾಲೋತ್ಸವ 2018 ವಿಶೇಷ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮವು ಆ.5 ರಂದು ಭಾನುವಾರ ಮೀಯಪದವು ವಿದ್ಯಾವರ್ಧಕ ಶಾಲೆಯಲ್ಲಿ ನಡೆಯಲಿದೆ.
  ಬೆಳಿಗ್ಗೆ 9.30ಕ್ಕೆ ಜಿಲ್ಲಾ ಲೈಬ್ರರಿ ಕೌನ್ಸಿಲ್ ಅಧ್ಯಕ್ಷ ಡಾ.ಪಿ.ಪ್ರಭಾಕರನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಕೇರಳ ಸರಕಾರದ ಭಾರತ್ ಭವನ್ನ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಶಂಕರ ರೈ ಮಾಸ್ತರ್ ಉದ್ಘಾಟಿಸುವರು. ನಿವೃತ್ತ ಪ್ರಾಂಶುಪಾಲ ಡಾ.ಎನ್.ಇಸ್ಮಾಯಿಲ್, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ, ಕೇರಳ ರಾಜ್ಯ ಲೈಬ್ರರಿ ಕೌನ್ಸಿಲ್ ಸದಸ್ಯ ಯು.ಶಾಮ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಮೀಯಪದವು ಹಿರಿಯ ಪ್ರಾಥಮಿಕ ಶಾಲಾ ಪ್ರಬಂಧಕ ಎಂ.ಶ್ರೀಧರ ರಾವ್, ತಾಲೂಕು ಲೈಬ್ರರಿ ಕೌನ್ಸಿಲ್ ಉಪಾಧ್ಯಕ್ಷ ಎಚ್.ಎ.ಮೊಹಮ್ಮದ್ ಮಾಸ್ತರ್, ಕಾರ್ಯಕಾರಿ ಸಮಿತಿ ಸದಸ್ಯ ಪಿ.ರಾಮಚಂದ್ರ ಭಟ್ ಉಪಸ್ಥಿತರಿದ್ದು ಶುಭಾಶಂಸನೆಗೈಯ್ಯುವರು.
   ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಅಧ್ಯಕ್ಷ ಎಸ್.ನಾರಾಯಣ ಭಟ್ ಅಧ್ಯಕ್ಷತೆ ವಹಿಸುವರು. ಮೀಂಜ ಗ್ರಾ.ಪಂ. ಅಧ್ಯಕ್ಷೆ ಶಂಶಾದ್ ಶುಕೂರ್ ಉದ್ಘಾಟಿಸುವರು. ಮಂಜೇಶ್ವರ ಗೋವಿಂದ ಪೈ ಸ್ಮಾರಕ-ಗಿಳಿವಿಂಡಿನ ಕಾರ್ಯದಶರ್ಿ ಕೆ.ಆರ್.ಜಯಾನಂದ ಬಹುಮಾನಗಳನ್ನು ವಿತರಿಸುವರು. ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲಾ ಸಂಚಾಲಕ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಜಿಲ್ಲಾ ಲೈಬ್ರರಿ ಕೌನ್ಸಿಲ್ ಸದಸ್ಯೆ ವನಿತಾ ಆರ್.ಶೆಟ್ಟಿ, ತಾಲೂಕು ಲೈಬ್ರರಿ ಕೌನ್ಸಿಲ್ ಕಾರ್ಯಕಾರಿ ಸಮಿತಿ ಸದಸ್ಯ ಎ.ಬಿ.ರಾಧಾಕೃಷ್ಣ ಬಲ್ಲಾಳ್ ಶುಭಾಶಂಸನೆಗೈಯ್ಯುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries