HEALTH TIPS

No title

       ವಿಚ್ಛೇದನ ತೀಪರ್ಿಗೂ ಮೊದಲೇ ಮರು ವಿವಾಹಕ್ಕೆ 'ಸುಪ್ರೀಂ' ಅಸ್ತು!
    ನವದೆಹಲಿ: ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೂ, ಸಂಧಾನ ಕೇಂದ್ರದಲ್ಲಿ ದಂಪತಿ ನಡುವೆ ಒಮ್ಮತದ ಅಭಿಪ್ರಾಯ ಮೂಡಿದರೆ ಆಕೆ ಅಥವಾ ಆತ ಎರಡನೇ ವಿವಾಹವಾಗಲು ಅವಕಾಶವಿದೆ ಎಂದು ಸುಪ್ರೀಂಕೋಟರ್್ ಮಹತ್ವದ ತೀಪರ್ು ನೀಡಿದೆ.
    ವಿಚ್ಛೇದನ ಪ್ರಕರಣವೊಂದರ ವಿಚಾರಣೆ ವೇಳೆ ಕೋಟರ್್ ಇಂತಹ ಅಭಿಪ್ರಾಯಪಟ್ಟಿದ್ದು, ಈ ಮೂಲಕ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗಲೇ 2ನೇ ವಿವಾಹವಾಗಿ, 7 ವರ್ಷಗಳಿಂದ ಕಾನೂನು ಸುಳಿಗೆ ಸಿಲುಕಿದ್ದ ವ್ಯಕ್ತಿಗೆ ಸಮಧಾನ ನೀಡಿದೆ.
    ವಿಚ್ಛೇದನ ಪ್ರಕರಣವೊಂದರ ವಿಚಾರಣೆ ನಡೆಸಿದ ಸುಪ್ರೀಂ ಕೋಟರ್್ ನ್ಯಾಯಮೂತರ್ಿ  ನಾಗೇಶ್ವರ ರಾವ್ ನೇತೃತ್ವದ ಪೀಠ, ಇಂಥಹ ವಿವಾಹಕ್ಕೆ ನಮ್ಮ ಕಾನೂನಿನಲ್ಲಿ ಅವಕಾಶವಿದೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ ಇದಕ್ಕೆ ವಿರುದ್ಧವಾಗಿ ಕೌಟುಂಬಿಕ ಕೋಟರ್್ ಹಾಗೂ ಹೈಕೋಟರ್್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದರು. ಆ ಮೂಲಕ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗಲೇ ಎರಡನೇ ವಿವಾಹವಾಗಿ, ಕಳೆದ ಏಳು ವರ್ಷಗಳಿಂದ ಕಾನೂನು ಸುಳಿಗೆ ಸಿಲುಕಿದ್ದ ವ್ಯಕ್ತಿಗೆ ಕೋಟರ್್ ನಿರಾಳತೆ ನೀಡಿದೆ. ಅಂತೆಯೇ ಆತನ ವಿರುದ್ಧ ಮೊದಲ ಪತ್ನಿ ಸಲ್ಲಿಸಿದ್ದ ಅಜರ್ಿಯನ್ನು ವಜಾಗೊಳಿಸಿದೆ.
     ಏನಿದು ಪ್ರಕರಣ?:
   ಅನುರಾಗ್ ಎಂಬ ವ್ಯಕ್ತಿಯೊಬ್ಬರಿಂದ ವಿಚ್ಛೇದನ ಕೋರಿ ಪತ್ನಿ ರಚನಾ ಎಂಬುವವರು 2009ರಲ್ಲಿ ದೆಹಲಿಯ ಕೌಟುಂಬಿಕ ಕೋಟರ್್ ಮೊರೆ ಹೋಗಿದ್ದರು. ರಚನಾ ಜೊತೆ ಬಾಳಲು ತಾವು ಸಿದ್ಧವಿರುವುದಾಗಿ ಅನುರಾಗ್ ಇನ್ನೊಂದು ಅಜರ್ಿ ಸಲ್ಲಿಸಿದ್ದರು. ರಚನಾರ ಅಜರ್ಿಯನ್ನು ಮಾನ್ಯ ಮಾಡಿದ್ದ ಕೋಟರ್್, ಅನುರಾಗ್ ಅಜರ್ಿಯನ್ನು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಅನುರಾಗ್ ಹೈಕೋಟರ್್?ಗೆ ಹೋಗಿದ್ದರು. ಈ ಅಜರ್ಿ ಇತ್ಯರ್ಥ ಬಾಕಿ ಇರುವಾಗಲೇ ಸಂಧಾನ ಕೇಂದ್ರದಲ್ಲಿ (ಮೀಡಿಯೇಷನ್ ಸೆಂಟರ್) ವಿಚ್ಛೇದನದ ಕುರಿತು ದಂಪತಿ ಒಪ್ಪಂದಕ್ಕೆ ಬಂದರು. ರಚನಾ ಜತೆ ಬಾಳಲು ಸಿದ್ಧ ಎಂದು ಹೈಕೋಟರ್್ ಗೆ ಸಲ್ಲಿಸಿರುವ ಅಜರ್ಿಯನ್ನು ವಾಪಸ್ ಪಡೆಯುವುದಾಗಿ ಅನುರಾಗ್ ಹೇಳಿದ್ದರು. ಅದನ್ನು ರಚನಾ ಒಪ್ಪಿಕೊಂಡಿದ್ದರು. ಕಾನೂನು ಪ್ರಕಾರ 30 ದಿನಗಳ ಒಳಗಾಗಿ ಈ ಕುರಿತು ಅನುರಾಗ್ ಹೈಕೋಟರ್್?ಗೆ ಲಿಖಿತ ಮಾಹಿತಿ ನೀಡಿದರು.
    ಈ ಮಾಹಿತಿ ಪುರಸ್ಕರಿಸಿ 2011ರ ಡಿಸೆಂಬರ್ 20ರಂದು ಹೈಕೋಟರ್್ ಅಂತಿಮ ತೀಪರ್ು ನೀಡಿತು. ಆದರೆ ತೀಪರ್ು ಬರುವ ಒಂದು ವಾರ ಮೊದಲು (ಡಿಸೆಂಬರ್ 6ರಂದು) ಅನುರಾಗ್ ಎರಡನೆಯ ವಿವಾಹವಾಗಿದ್ದರು. ಇದನ್ನು ರಚನಾ ಕೌಟುಂಬಿಕ ಕೋಟರ್್ ನಲ್ಲಿ ಪ್ರಶ್ನಿಸಿದ್ದರು. ಅಂತಿಮ ತೀಪರ್ು ಬರುವ ಮುನ್ನ ಮರುವಿವಾಹವಾಗಿದ್ದು ಸರಿಯಲ್ಲ ಎಂದಿದ್ದ ಕೋಟರ್್, ಎರಡನೆಯ ವಿವಾಹವನ್ನು ರದ್ದು ಮಾಡಿತ್ತು. ಹೈಕೋಟರ್್ ಕೂಡ ಈ ವಿವಾಹಕ್ಕೆ ಮಾನ್ಯತೆ ಇಲ್ಲ ಎಂದಿತ್ತು. ಅಂತಿಮವಾಗಿ ಅನುರಾಗ್ ಸುಪ್ರೀಂಕೋಟರ್್ ಮೊರೆ ಹೋಗಿದ್ದರು.
   ಅಜರ್ಿ ಸ್ವೀಕರಿಸಿದ ಸುಪ್ರೀಂ ಕೋಟರ್್ ವಿಚಾರಣ ನಡೆಸಿ, ಕೌಟುಂಬಿಕ ಕೋಟರ್್?ಗಳು ನೀಡಿರುವ ಆದೇಶ ಪ್ರಶ್ನಿಸಿ ಪತಿ ಅಥವಾ ಪತ್ನಿ ಹೈಕೋಟರ್್ ಗೆ ಸಲ್ಲಿಸಿದ್ದ ಅಜರ್ಿಯ ತೀಪರ್ು ಬಾಕಿಯಿದ್ದರೂ, ದಂಪತಿ ನಡುವೆ ಸಂಧಾನ ಕೇಂದ್ರದಲ್ಲಿ ಒಪ್ಪಂದ ಏರ್ಪಟ್ಟರೆ, ಈ ಕುರಿತು ಹೈಕೋಟರ್್ ಗೆ ಲಿಖಿತ ಮಾಹಿತಿ ನೀಡಿದರೆ ಸಾಕು. ಪ್ರಕರಣದ ಅಂತಿಮ ತೀಪರ್ು ಬರುವವರೆಗೆ ಕಾಯಬೇಕಿಲ್ಲ. ಮರುಮದುವೆಯಾಗುವ ಅಧಿಕಾರ ಪತಿ ಅಥವಾ ಪತ್ನಿಗೆ ಇದೆ ಎಂದು ಮಹತ್ವದ ತೀಪರ್ು ನೀಡಿತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries