HEALTH TIPS

No title

                       ಕಡಂಬಾರಿನಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆ
    ಮಂಜೇಶ್ವರ: ಕಡಂಬಾರು ಶ್ರೀ ಮಹಾವಿಷ್ಣುಮೂತರ್ಿ ದೇವಸ್ಥಾನದ ಜೀಣರ್ೋದ್ಧಾರ ನವೀಕರಣದ ಅಂಗವಾಗಿ ನಿಧಿ ಸಮರ್ಪಣಾ ಕಾರ್ಯಕ್ರಮ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಭಾನುವಾರ ಕ್ಷೇತ್ರದಲ್ಲಿ ಜರಗಿತು.
  ಬೆಳಿಗ್ಗೆ ಪ್ರಾರ್ಥನೆ, ಶ್ರೀ ದೇವರಿಗೆ ಪವಮಾನ ಆಭೀಷೇಕ, ನಿಧಿ ಸಮರ್ಪಣೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಬ್ರಹ್ಮ ಶ್ರೀ ವಕರ್ಾಡಿ ಬಾಲಕೃಷ್ಣ ತಂತ್ರಿಗಳು ಉಪಸ್ಥಿತರಿದ್ದರು. ಧಾಮರ್ಿಕ  ಮುಂದಾಳು ಬಿ. ವಸಂತ ಪೈ ಬದಿಯಡ್ಕ ವಿಜ್ಞಾಪನಾ ಪತ್ರಿಕೆ ಬಿಡುಗಡೆಗೊಳಿಸಿದರು. ಕ್ಷೇತ್ರದ ಜೀಣರ್ೋದ್ಧಾರ ಸಮಿತಿ ಅಧ್ಯಕ್ಷ ಕೆ. ಜಯರಾಮ ಶೆಟ್ಟಿ ಸಮಾರಂಭದ  ಅಧ್ಯಕ್ಷತೆ ವಹಿಸಿದರು. ಐಲ ಶ್ರೀ ದುಗರ್ಾಪರಮೇಶ್ವರೀ ದೇವಸ್ಥಾನದ ಆಡಳಿತ ಮೋಕ್ತೇಸರ ನಾರಾಯಣ ಹೆಗ್ಡೆ ಕೋಡಿಬೈಲು, ಕ್ಷೇತ್ರದ ಹಿರಿಯರಾದ  ಇಂದಿರಮ್ಮ, ಸೇವಾ ಸಮಿತಿ ಅಧ್ಯಕ್ಷ ಚಂದಪ್ಪ ಶೆಟ್ಟಿ ಕಜೆಕೋಡಿ, ಜೀಣರ್ೋದ್ಧಾರ ಸಮಿತಿ ಮಹಿಳಾ ಘಟಕ ಅಧ್ಯಕ್ಷೆ ಸುಂದರಿ. ಆರ್. ಶೆಟ್ಟಿ ಕಡಂಬಾರ್, ಕೆ. ಎನ್. ಆಳ್ವ, ಪವಿತ್ರಪಾಣಿ ಸುಬ್ರಹ್ಮಣ್ಯ ಅನಲತ್ತಾಯ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭಾಶಂಸನೆಗೈದರು. ಸಂಘಟನಾ ಕಾರ್ಯದಶರ್ಿ ಸಂಕಬೈಲ್ ಸತೀಶ ಆಡಪ ಸ್ವಾಗತಿಸಿ, ಕ್ಷೇತ್ರದ ಆಡಳಿತ ಮೊಕ್ತೇಸರ ಎಸ್. ಎನ್ ಕಡಂಬಾರ್ ಜೀಣರ್ೋದ್ಧಾರದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನಾಡಿದರು. ಸಮಿತಿ ಕಾರ್ಯದಶರ್ಿ ರಾಮ ಚಂದ್ರರಾವ್ ಕಡಂಬಾರ್ ನಿರೂಪಿಸಿ, ಯು. ಜಿ. ರೈ ವಂದಿಸಿದರು. ಬಳಿಕ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries