HEALTH TIPS

ಯಾವುದೇ ಶೀರ್ಷಿಕೆಯಿಲ್ಲ

              4 ಉಗ್ರರ ಸೆದೆ ಬಡಿದ ಸೇನೆ, ಪ್ರತ್ಯೇಕ ಪ್ರಕರಣಗಳಲ್ಲಿ 9 ಸೈನಿಕರಿಗೆ ಗಾಯ
            ವರದಿಗಾಗಿ ತೆರಳಿದ್ದ ಪತ್ರಕರ್ತರ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ ಸೇನೆ
   ಶ್ರೀನಗರ: ದೇಶಾದ್ಯಂತ ಜನ ಗಣೇಶ ಚತುಥರ್ಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.
   ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ, ಸಿಆರ್ಪಿಎಫ್ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾಯರ್ಾಚರಣೆ ನಡೆಸಿ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅಂತೆಯೇ ಗುಂಡಿನ ಚಕಮಕಿಯಲ್ಲಿ 9 ಯೋಧರು ಗಾಯಗೊಂಡಿದ್ದಾರೆ.
   ಬಾರಾಮುಲ್ಲಾ ಎನ್ ಕೌಂಟರ್ ವೇಳೆ ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದು, ತಪ್ಪಿಸಿಕೊಂಡಿದ್ದ ಉಗ್ರರಿಗಾಗಿ ಸೇನೆ ಶೋಧ ಕಾಯರ್ಾಚರಣೆ ನಡೆಸಿತ್ತು. ಈ ವೇಳೆ ರಿಯಾಸಿ ಜಿಲ್ಲೆಯ ಕಕರಿಯಾಲ್ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಗುರುವಾರ ಕಾಯರ್ಾಚರಣೆಯನ್ನು ನಡೆಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಡಿಎಸ್ಪಿ ಮೋಹನ್ ಲಾಲ್ ಸೇರಿದಂತೆ ಐವರು ಸಿಆರ್ಪಿಎಫ್? ಯೋಧರು ಮತ್ತು ಮೂವರು ಪೊಲೀಸರು ಗಾಯಗೊಂಡಿದ್ದಾರೆ.
   ಇದೀಗ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವಾತ್ಲಾಬ್ ಸೆಕ್ಟರ್ ನ ಕಮಾಂಡರ್ ಬ್ರಿಗೇಡಿಯರ್ ವಿ ಹರಿಹರನ್ ತಿಳಿಸಿದ್ದಾರೆ.
       ವರದಿಗಾಗಿ ತೆರಳಿದ್ದ ಪತ್ರಕರ್ತರ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ ಸೇನೆ:
    ಈ ಮಧ್ಯೆ ರಿಯಾಸಿ ಜಿಲ್ಲೆಯ ಕಕರಿಯಾಲ್ ಪ್ರದೇಶದಲ್ಲಿ ನಡೆಯುತ್ತಿದ್ದ ಎನ್ ಕೌಂಟರ್ ವರದಿಗೆ ತೆರಳಿದ್ದ ಪತ್ರಕರ್ತರೂ ಕೂಡ ಅಪಾಯಕ್ಕೆ ಸಿಲುಕಿದ ಘಟನೆ ನಡೆದಿತ್ತು. ಈ ವೇಳೆ ಸ್ಥಳದಲ್ಲಿದ್ದ ಸೈನಿಕರು ಪತ್ರಕರ್ತರನ್ನು ನೆಲದ ಮೇಲೆ ಮಲಗಿಸಿ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿದರು. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries