HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ವರದಕ್ಷಿಣೆ ದೂರು: 'ಸಿಟ್ಟು' ಹಾಗೂ 'ಸೇಡಿನ' ಉದ್ದೇಶದಿಂದ ಕಾನೂನು ದುರ್ಬಳಕೆ ಸಲ್ಲದು ಎಂದ ಸುಪ್ರೀಂ
    ನವದೆಹಲಿ: ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣ ಬಂಧನ ಮಾಡಬಾರದೆನ್ನುವ ತನ್ನ ಹಿಂದಿನ ತೀರ್ಪನ್ನು ಮಾಪರ್ಾಡುಗೊಳಿಸಿ ಶುಕ್ರವಾರ ಆದೇಶಿಸಿದ್ದ ಸುಪ್ರೀಂ ಕೋಟರ್್ ಶನಿವಾರ "ಸಿಟ್ಟು" ಹಾಗೂ "ಸೇಡ"ನ್ನು ಹಿನ್ನೆಲೆಯಾಗಿಟ್ಟುಕೊಂಡು ತಾನು ನೀಡಿದ ತೀರ್ಪನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವಂತಿಲ್ಲ ಎಂದು ಎಚ್ಚರಿಸಿದೆ.
   ಎಂತಹಾ ಪರಿಸ್ಥಿತಿಯಲ್ಲಿಯೂ ನ್ಯಾಯಾಲಯಗಳು ತಮ್ಮ ಕಣ್ಣು, ಕಿವಿಗಳನ್ನು ಸದಾ ತೆರೆದಿಡಲಿವೆ. ಸಂತ್ರಸ್ಥರ ಹೆಸರಲ್ಲಿ ಅನುಕಂಪ ಗಿತ್ಟಿಸಿಕೊಂಡು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ, ನ್ಯಾಯಮೂತರ್ಿ ಎ ಎಂ ಖಾನ್ವಿಲ್ಕರ್ ಮತ್ತು ಡಿ.ಯು.ಚಂದ್ರಚೂಡ್  ಅವರನ್ನೊಳಗೊಂಡ ಪೀಠ ಹೇಳಿದೆ.
   ವಿವಾಹಿತ ಸ್ತ್ರೀ ಮೇಲೆ ನಡೆಯುವ ದೌರ್ಜನ್ಯ ತಡೆಗಾಗಿ 1983ರಲ್ಲಿಯೇ ಐಪಿಸಿ ಸೆಕ್ಷನ್ 498ಎ ಅನ್ನು ಅನುಷ್ಠಾನಗೊಳಿಸಲಾಗಿದೆ. ಅದರೆ ಮಹಿಳೆ ಹಾಗೂ ಅವರ ಕಡೆಯವರು ಈ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಗಂಡಂದಿರ ಮೇಲೆ ಕೌಟುಂಬಿಕ ದೌರ್ಜನ್ಯ ತಡೆಯುವುದಕ್ಕೆ ಹಾಗೂ ಪುರುಷರಿಗೆ ರಕ್ಷಣೆ ಒದಗಿಸಲು ಹೊಸ ಕಾನೂನು ಅಗತ್ಯವಿದೆ. ಸೆಕ್ಷನ್ 498ಎ ಅಡಿಯಲ್ಲಿನ "ಕಿರುಕುಳ" ಎನ್ನುವ ಶಬ್ದ ಅತ್ಯಂತ ಸೂಕ್ಷ್ಮ ಪದವಾಗಿದ್ದು ಪೋಲೀಸರ ಉತ್ಪ್ರೇಕ್ಷೆಯ ಕಾರಣದಿಂದ ವಿನಾಕಾರಣ ಗಂಡಂದಿರು ಜೈಲುಪಾಲಾಗುವ ಸಾಧ್ಯತೆ ಇದೆ ಎಂದು ಕೋಟರ್್ ಅಭಿಪ್ರಾಯ ಪಟ್ಟಿದೆ.
   ಈ ಹಿನ್ನೆಲೆಯಲ್ಲಿ ಕಾನೂನು ದುರ್ಬಳಕೆ ಆಗದಂತೆ ಸೂಕ್ತ "ಸಂರಕ್ಷಣಾ ಕ್ರಮ" ಗಳನ್ನು ಜಾರಿಗೆ ತರಬೇಕೆಂದು ನ್ಯಾಯಾಲಯ ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries