HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ಸಿಬಿಐ ಒಳಜಗಳ: 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಲು ಸಿವಿಸಿಗೆ ಸುಪ್ರೀಂ ಕೋಟರ್್ ಸೂಚನೆ
       ನವದೆಹಲಿ: ಸಿಬಿಐ ಮುಖ್ಯಸ್ಥ ಅಲೋಕ್ ವಮರ್ಾ ಅವರ ಮೇಲಿನ ಆರೋಪಗಳ ಕುರಿತು 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ ಸಿವಿಸಿಗೆ ಸುಪ್ರೀಂ ಕೋಟರ್್ ಶುಕ್ರವಾರ ಸೂಚಿಸಿದೆ.
   ಕೇಂದ್ರ ಸಕರ್ಾರದ ರಾತ್ರೋರಾತ್ರಿ ಕಡ್ಡಾಯ ರಜೆ ಪ್ರಶ್ನಿಸಿ ಅಲೋಕ್ ವಮರ್ಾ ಅವರು ಸಲ್ಲಿಸಿದ್ದ ಅಜರ್ಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂ ಕೋಟರ್್ ಮುಖ್ಯ ನ್ಯಾಯಮೂತರ್ಿ ರಂಜನ್ ಗೊಗೊಯ್ ಮತ್ತು ನ್ಯಾಯಮೂತರ್ಿ ಎಸ್.ಕೆ.ಕೌಲ್ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ಪೀಠ, 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿವಿಸಿಗೆ ಸೂಚನೆ ನೀಡಿದೆ.
   ಅಲೋಕ್ ವಮರ್ಾ ಪರವಾಗಿ ಹಿರಿಯ ವಕೀಲ ಫಾಲಿ ನಾರಿಮನ್ ಹಾಗೂ ಸಂಜಯ್ ಹೆಗ್ಡೆಯವರು ವಾದ ಮಂಡಿಸಿದ್ದರು. ಕೇಂದ್ರ ಸಕರ್ಾರದ ಪರವಾಗಿ ಅಟಾನರ್ಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ವಾದ ಮಂಡಿಸಿದರು.
   ವಿಚಾರಣೆ ವೇಳೆ ವಾದ ಮಂಡಿಸಿದ ಸಿವಿಸಿ ಪರ ವಕೀಲರು ತನಿಖೆಗೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಈ ವಿಚಾರದಲ್ಲಿ ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ. ದೇಶದ ಹಿತದೃಷ್ಟಿಯಿಂದ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಅಲೋಕ್ ವಮರ್ಾ ವಿರುದ್ಧ ಕೇಳಿ ಬಂದಿರುವ ಆರೋಪ ಸಂಬಂಧ 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತು.
    ಜೊತೆಗೆ ಸಿಬಿಐ ಹಂಗಾಮಿ ನಿದರ್ೇಶಕ ನಾಗೇಶ್ವರ್ ರಾವ್ ಅವರು ಯಾವುದೇ ನಿಧರ್ಾರಗಳನ್ನು ಕೈಗೊಳ್ಳದಂತೆ ತಿಳಿಸಿದ ನ್ಯಾಯಾಲಯ, ಕೇವಲ ದೈನಂದಿನ ಕಾರ್ಯ ನೋಡಿಕೊಳ್ಳಬಹುದು ಎಂದು ಹೇಳಿದೆ.
   ಪ್ರಕರಣ ಸಂಬಂಧ ಕೇಂದ್ರ ಹಾಗೂ ಸಿವಿಸಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಸಿಬಿಐ ಹಂಗಾಮಿ ನಿದರ್ೇಶಕ ರಾವ್ ಅಧಿಕಾರ ವಹಿಸಿಕೊಂಡ ಬಳಿಕ ತೆಗೆದುಕೊಂಡಿರುವ ನಿಧರ್ಾರದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ತಿಳಿಸುವಂತೆ ಸೂಚನೆ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries