HEALTH TIPS

ಯಾವುದೇ ಶೀರ್ಷಿಕೆಯಿಲ್ಲ

              ಅ.13 ರಂದು  ಕನ್ನಡ ಹೋರಾಟ ಸಮಿತಿ ಸಭೆ
      ಕಾಸರಗೋಡು: ಭಾಷಾ ಅಲ್ಪಸಂಖ್ಯಾಕ ಪ್ರದೇಶ ಕಾಸರಗೋಡಿನಲ್ಲಿ ಕನ್ನಡಿಗರ ಅಸ್ತಿತ್ವವನ್ನು ನಿಮರ್ೂಲನ ಮಾಡುವ ಶಕ್ತಿಗಳ ವಿರುದ್ಧ ಹೋರಾಡಲು ಹಾಗೂ ಕನ್ನಡಿಗರಲ್ಲಿ ಜಾಗೃತಿ ಮೂಡಿಸಲು ಸಮಸ್ತ ಕನ್ನಡಿಗರನ್ನು ಒಗ್ಗೂಡಿಸಿ ಬೃಹತ್ ಹೋರಾಟ ನಡೆಸುವ ಉದ್ದೇಶದಿಂದ ಕನ್ನಡ ಹೋರಾಟ ಸಮಿತಿಯ ಸಭೆ ಅ.13 ರಂದು ಅಪರಾಹ್ನ 3 ಗಂಟೆಗೆ ಬೀರಂತಬೈಲಿನಲ್ಲಿರುವ ಕನ್ನಡ ಅಧ್ಯಾಪಕ ಭವನದಲ್ಲಿ ಜರಗಲಿದೆ.
    ಕನ್ನಡಿಗರನ್ನು ಮಲಯಾಳೀಕರಣಗೊಳಿಸುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಿ ಅಧ್ಯಾಪಕರ ನೇಮಕಾತಿ, ವಿವಿಧ ಇಲಾಖೆಗಳಲ್ಲಿ ಕನ್ನಡ ಬಲ್ಲ ಉದ್ಯೋಗಾಥರ್ಿಗಳನ್ನು ನೇಮಕಾತಿ ಮಾಡಬೇಕು, ಸರಕಾರಿ ಹಾಗೂ ಇನ್ನಿತರ ಕಚೇರಿಗಳಲ್ಲಿ ದ್ವಿಭಾಷಾ ಕಾನೂನಿನ ಪ್ರಕಾರ ಕನ್ನಡ ಅಜರ್ಿ, ಕನ್ನಡ ನಾಮಫಲಕ ಅಳವಡಿಸಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುವ ಕುರಿತು ಸಭೆಯಲ್ಲಿ ಚಚರ್ಿಸಿ ತೀಮರ್ಾನ ಕೈಗೊಳ್ಳಲಾಗುವುದು. ಕನ್ನಡ ಹೋರಾಟ ಸಮಿತಿಯ ಸಭೆಯಲ್ಲಿ ಕನ್ನಡ ಪರ ಸಂಘಗಳ ಪದಾಧಿಕಾರಿಗಳು, ವಿದ್ಯಾಥರ್ಿ ಪ್ರತಿನಿಧಿಗಳು, ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಪದಾಧಿಕಾರಿಗಳು, ಕನ್ನಡ ಮುಂದಾಳುಗಳು, ಕನ್ನಡ ಮಹಿಳಾ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹೋರಾಟ ಸಮಿತಿಯ ಪದಾಧಿಕಾರಿಗಳು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries