HEALTH TIPS

ಯಾವುದೇ ಶೀರ್ಷಿಕೆಯಿಲ್ಲ

          ಕಲ್ಲು ತೂರಾಟಗಾರರು ಉಗ್ರರ ಕಾರ್ಯಕರ್ತರು: ಸೇನಾ ಮುಖ್ಯಸ್ಥ
     ಶ್ರೀನಗರ: ಕಲ್ಲು ತೂರಾಟಗಾರರು ಉಗ್ರರ ಕಾರ್ಯಕರ್ತರು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶನಿವಾರ ಹೇಳಿದ್ದಾರೆ.
     ಕಾಶ್ಮೀರದಲ್ಲಿ ನಡೆದ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರು.  ಪ್ರಕರಣ ಸಂಬಂಧ ಕಾಲಾಳು ಪಡೆ (ಇನ್'ಫೆಂಟ್ರಿ ಡೇ) ದಿನ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯ ಅಮರ ಜವಾನ್ ಜ್ಯೋತಿಯಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿದ ರಾವತ್ ಅವರು, ಕಲ್ಲು ತೂರಾಟದ ವೇಳೆ ಹುತಾತ್ಮರಾಗಿರುವ ಯೋಧ ರಸ್ತೆ ನಿಮರ್ಾಣ ಕಾರ್ಯ ನಡೆಸುತ್ತಿದ್ದ ವೇಳೆ ಗಡಿ ರಸ್ತೆಗಳನ್ನು ಕಾಯುತ್ತಿದ್ದ ತಂಡದೊಂದಿಗಿದ್ದರು. ಕೆಲ ಜನರು ಕಲ್ಲು ತೂರಾಟಗಾರರನ್ನು ಭಯೋತ್ಪಾದಕರ ಬೆಂಬಲಿಗರೆಂದು ತಿಳಿಯಬೇಡಿ ಎಂದು ಹೇಳುತ್ತಾರೆ. ಕಲ್ಲು ತೂರಾಟಗಾರರು ಉಗ್ರರ ಕಾರ್ಯಕರ್ತರು. ಪ್ರತೀ ಬಾರಿ ಸೇನೆ ಸುಮ್ಮನೆ ಇದ್ದು, ನೋವನ್ನು ಸಹಿಸಿಕೊಳ್ಳುತ್ತಿರುತ್ತದೆ. ಆದರೆ, ಈ ಬಾರಿ ಕಲ್ಲು ತೂರಾಟಗಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಲ್ಲು ತೂರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
  ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳಬೇಕೆಂಬುದನ್ನು ಪಾಕಿಸ್ತಾನ ಬಯಸುತ್ತಿದೆ. ಆದರೆ, ಯಾವುದೇ ಪರಿಸ್ಥಿತಿ ಎದುರಿಸಲು ಭಾರತ ಬಲಿಷ್ಠವಾಗಿದೆ. ಯಾವುದೇ ರೀತಿಯ ಕಾಯರ್ಾಚರಣೆ ನಡೆಸಲು ನಾವು ಸಂಪೂರ್ಣವಾಗಿ ಸಾಮಥ್ರ್ಯವನ್ನು ಹೊಂದಿದ್ದೇವೆ ಎಂದವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries