ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ: ಅಮಿತ್ ಶಾ
ಕಣ್ಣೂರು: ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ತಾಳಿಕ್ಕಾವು'ನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿಯನ್ನು ಇಂದು ಬೆಳಿಗ್ಗೆ ಉದ್ಘಾಟಿಸಿದ ಬಳಿಕ ಮಾತನಾಡಿರುವ ಅವರು, ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.
ಕೇರಳ ರಾಜ್ಯದಲ್ಲಿಂದು ಧಾಮರ್ಿಕ ನಂಬಿಕೆಗಳು ಹಾಗೂ ರಾಜ್ಯ ಸಕರ್ಾರದ ಕ್ರೌರ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಬಿಜೆಪಿ, ಆರ್'ಎಸ್ಎಸ್ ಹಾಗೂ ಇತರೆ ಸಂಘಟನೆಗಳ 2000ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಲಾಗಿದೆ. ಬಿಜೆಪಿ ಅಯ್ಯಪ್ಪ ಭಕ್ತರ ಜೊತೆಗೆ ಬಂಡೆಯಂತೆ ನಿಂತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕೇರಳದ ಆಡಳಿತಾರೂಢ ಸಕರ್ಾರಕ್ಕೆ ಎಚ್ಚರಿಕೆ ನೀಡಿರುವ ಅವರು, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಹಿಂಸಾಚಾರ ಸೃಷ್ಟಿಸುತ್ತಿರುವವರಿಗೆ ಒಂದು ಮಾತನ್ನು ಹೇಳುತ್ತೇನೆ. ವಿವಿಧ ನಿಯಮ ಹಾಗೂ ಪದ್ಧತಿಗಳೊಂದಿಗೆ ಸಾಕಷ್ಟು ದೇವಾಲಯಗಳು ನಡೆಯುತ್ತಿವೆ. ಸಕರ್ಾರದ ವರ್ತನೆ ಹೀಗೆಯೇ ಮುಂದುವರೆದರೆ, ಎಲ್'ಡಿಎಸ್ ಸಕರ್ಾರವನ್ನು ಕೆಳಗಿಳಿಸಲು ಬಿಜೆಪಿ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.
ಕಣ್ಣೂರು: ಬಿಜೆಪಿ ಬಂಡೆಯಂತೆ ಅಯ್ಯಪ್ಪ ಭಕ್ತರೊಂದಿಗೆ ನಿಂತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ತಾಳಿಕ್ಕಾವು'ನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಕಚೇರಿಯನ್ನು ಇಂದು ಬೆಳಿಗ್ಗೆ ಉದ್ಘಾಟಿಸಿದ ಬಳಿಕ ಮಾತನಾಡಿರುವ ಅವರು, ಶಬರಿಮಲೆ ಮಹಿಳಾ ಪ್ರವೇಶದ ವಿರುದ್ಧ ಪ್ರತಿಭಟಿಸಿದ್ದ 2000 ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.
ಕೇರಳ ರಾಜ್ಯದಲ್ಲಿಂದು ಧಾಮರ್ಿಕ ನಂಬಿಕೆಗಳು ಹಾಗೂ ರಾಜ್ಯ ಸಕರ್ಾರದ ಕ್ರೌರ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಬಿಜೆಪಿ, ಆರ್'ಎಸ್ಎಸ್ ಹಾಗೂ ಇತರೆ ಸಂಘಟನೆಗಳ 2000ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಲಾಗಿದೆ. ಬಿಜೆಪಿ ಅಯ್ಯಪ್ಪ ಭಕ್ತರ ಜೊತೆಗೆ ಬಂಡೆಯಂತೆ ನಿಂತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಕೇರಳದ ಆಡಳಿತಾರೂಢ ಸಕರ್ಾರಕ್ಕೆ ಎಚ್ಚರಿಕೆ ನೀಡಿರುವ ಅವರು, ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಹಿಂಸಾಚಾರ ಸೃಷ್ಟಿಸುತ್ತಿರುವವರಿಗೆ ಒಂದು ಮಾತನ್ನು ಹೇಳುತ್ತೇನೆ. ವಿವಿಧ ನಿಯಮ ಹಾಗೂ ಪದ್ಧತಿಗಳೊಂದಿಗೆ ಸಾಕಷ್ಟು ದೇವಾಲಯಗಳು ನಡೆಯುತ್ತಿವೆ. ಸಕರ್ಾರದ ವರ್ತನೆ ಹೀಗೆಯೇ ಮುಂದುವರೆದರೆ, ಎಲ್'ಡಿಎಸ್ ಸಕರ್ಾರವನ್ನು ಕೆಳಗಿಳಿಸಲು ಬಿಜೆಪಿ ಹಿಂಜರಿಯುವುದಿಲ್ಲ ಎಂದು ತಿಳಿಸಿದ್ದಾರೆ.


