HEALTH TIPS

ಜಾಮೀನು ಷರತ್ತು ಉಲ್ಲಂಘನೆ: ರಾಹುಲ್ ಈಶ್ವರ್ ಬಂಧನ

ಪಲಕ್ಕಾಡ್: ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರನ್ನು ಸೋಮವಾರ ಪಲಕ್ಕಾಡ್ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಮಹಾಸಭಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿಲು ಪಲಕ್ಕಾಡ್ ಆಗಿಮಿಸಿ, ಪಿಡಬ್ಲ್ಯುಡಿ ವಿಶ್ರಾಂತಿ ಗೃಹದಲ್ಲಿದ್ದ ರಾಹುಲ್ ಈಶ್ವರ್ ಅವರನ್ನು ಪೊಲೀಸ್ ಇಂದು ವಶಕ್ಕೆ ಪಡೆದಿದ್ದಾರೆ. ಷರತ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಳೆದ ಶನಿವಾರ ರಣ್ಣಿ ಕೋರ್ಟ್ ರಾಹುಲ್ ಈಶ್ವರ್ ಅವರ ಜಾಮೀನನ್ನು ರದ್ದುಗೊಳಿಸಿ, ಆರೋಪಿಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ ನಂತರ ಅಕ್ಟೋಬರ್ 17ರಂದು ಮಹಿಳೆಯರ ಪ್ರವೇಶ ವಿರೋಧಿಸಿ ಪಂಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಈಶ್ವರ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜಾಮೀನು ಷರತ್ತುಗಳ ಪ್ರಕಾರ, ರಾಹುಲ್ ಈಶ್ವರ್ ಅವರು ಪ್ರತಿ ಶನಿವಾರ ಪೊಲೀಸ್ ಠಾಣೆಗೆ ಹಾಜರಾಗಬೇಕಿತ್ತು. ಆದರೆ ಪಂಪ ಪೊಲೀಸ್ ಠಾಣೆಗೆ ಹಾಜರಾಗದ ರಾಹುಲ್ ಈಶ್ವರ್ ಅವರ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries