HEALTH TIPS

ಪೊಸಡಿಗುಂಪೆ ಪರಿಸರದಲ್ಲಿ ಶಿಲಾಯುಧ ಪತ್ತೆ

ಉಪ್ಪಳ: ಶಿಲಾಯುಗದ ಕಾಲಘಟ್ಟದ ಮೊನಚಾದ ಆಯುಧವೊಂದು ಮಂಜೇಶ್ವರ ತಾಲೂಕಿನ ಪೈವಳಿಕೆ ಗ್ರಾ.ಪಂ ವ್ಯಾಪ್ತಿಯ ಕನಿಯಾಲ ಕೆದುಕೋಡಿ ಎಂಬಲ್ಲಿ ಪತ್ತೆಯಾಗಿದೆ. ಚಾರಣಧಾಮ ಪೊಸಡಿಗುಂಪೆ ಬೆಟ್ಟ ಪ್ರದೇಶದ ತಪ್ಪಲಿನಲ್ಲಿರುವ ಬಾಲಕೃಷ್ಣ ಭಟ್ಟರ ಅಡಿಕೆ ತೋಟದಲ್ಲಿ ಶಿಲಾಯುಗದ ನುಣುಪಾದ ಸುಮಾರು 15.ಸೆಂ.ಮೀ ಉದ್ದದ ಕಲ್ಲೊಂದು ಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ. ಲೋಹ ಬಳಕೆಯ ಮೊದಲು ಮುನುಷ್ಯ ದೀರ್ಘ ಕಾಲದವರೆಗೆ ಗೆಡ್ಡೆ ಗೆಣಸುಗಳನ್ನು ಅಗೆಯಲು, ಪ್ರಾಣಿಗಳನ್ನು ಕೊಲ್ಲಲು, ಬೇಟೆಯಾಡಿದ ಪ್ರಾಣಿಗಳ ಮಾಂಸವನ್ನು ಸೀಳಲು ಮತ್ತು ಕತ್ತರಿಸಲು ಇಂತಹ ಕಲ್ಲನ್ನು ಉಪಯೋಗಿಸಿದ್ದಿರಬಹುದೆಂದು ಅಂದಾಜಿಸಲಾಗಿದೆ. ಸುಮಾರು 40 ಸಾವಿರ ವರ್ಷಕ್ಕಿಂತಲೂ ಹಳೆಯದಾದ ಇದೇ ರೀತಿಯ ಕಲ್ಲು ವರ್ಷಗಳ ಹಿಂದೆ ಎರ್ನಾಕುಳಂ ಜಿಲ್ಲೆಯ ಕೊಡನಾಡ್ ಎಂಬಲ್ಲಿ ಪತ್ತೆಯಾಗಿತ್ತು. ಬಳಿಕ ಇದೇ ಮೊದಲ ಬಾರಿಗೆ ಮಲಬಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನಿಯಾಲದಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಪೊಸಡಿಗುಂಪೆ ಪ್ರದೇಶದಲ್ಲಿ ಹಲವು ಬಾಂಜಾರ ಗುಹೆಗಳು, ಪುರಾತನ ಸುರಂಗಗಳು ಇದ್ದು, ಇದೀಗ ಶಿಲಾಯುಗದ ಕಲ್ಲೊಂದು ಕಂಡು ಬಂದಿರುವುದು ಸ್ಥಳಿಯರಲ್ಲಿ ಕೌತುಕ ಮೂಡಿಸಿದೆ. ಈ ಪ್ರದೇಶಕ್ಕೆ ಮಂಗಳವಾರ ಕಾಞಂಗಾಡು ನೆಹರೂ ಕಾಲೇಜಿನ ಇತಿಹಾಸ ಸಂಶೋಧಕ ಪ್ರೊ.ನಂದಕುಮಾರ್ ಕೊರೋತ್ ಭೇಟಿ ನೀಡಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ. ಪತ್ತೆಯಾದ ಶಿಲಾಯುಧವೆನ್ನಬಹುದಾದ ಕಲ್ಲಿನ ಬುಡ ದಪ್ಪಗಿದ್ದು ಒಂದು ಕೈಯಲ್ಲಿ ಹಿಡಿಯುವಂತಿದೆ, ತುದಿಯು ಮೊನಚಾಗಿದೆ. ಸುಮಾರು 15.ಸೆಂ.ಮೀ ಉದ್ದವಿರುವ ಕಲ್ಲಿನ ಒಂದು ಪಾಶ್ರ್ವ ಹರಿತವಾಗಿದೆ. 5.ಸೆಂ.ಮೀ ಅಗಲವಿರುವ ಕಲ್ಲು ಮಿಸೋಲಿಥಿಕ್ ಶಿಲಾಯುಗ ಕಾಲಘಟ್ಟದ ಚೆರ್ಟ್ ಬುರಿನ್ ಮೈಕ್ರೋಲಿತ್ ಶಿಲಾಯುಧವನ್ನು ಹೋಲುತ್ತದೆ. ಏನಂತಾರೆ ತಜ್ಞರು: ಎರ್ನಾಕುಳಂ ಜಿಲ್ಲೆಯ ಕೊಡನಾಡ್ ನಲ್ಲಿ ಈರೀತಿಯ ಶಿಲಾಯುಧ ಕಂಡುಬಂದಿದ್ದು, ಕೇರಳದ ಉತ್ತರ ಮಲಬಾರಿನ ಬೇರೆಲ್ಲೂ ಇಂತಹ ಶಿಲಾಯುಧ ಪತ್ತೆಯಾಗಿಲ್ಲ. ಮಿಸೋಲಿಫಿಕ್ ಶಿಲಾಯುಗ ಕಾಲಘಟ್ಟದ್ದೆಂದು ಮೇಲ್ನೋಟದಲ್ಲಿ ಕಂಡುಬರುವ ಇಂತಹ ಶಿಲಾಯುಧಗಳ ಬಗ್ಗೆ ಹೆಚ್ಚಿನ ಸಂಶೋಧನೆ ಅಗತ್ಯವಿದೆ. ಸ್ಥಳ ಸಂದರ್ಶನ ನಡೆಸಿ ಬಳಿಕ ಅಗತ್ಯ ಸಂಶೋಧನೆಗೆ ಪ್ರಯತ್ನಿಸಲಾಗುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries