ಕುಂಬಳೆ: ಪಾಶ್ಚಿಮಾತ್ಯ ಕಲೆಗಳು ಕೆರಳಿಸುತ್ತಿದ್ದರೆ, ಭಾರತೀಯ ಕಲೆಗಳು ಮನಸ್ಸನ್ನು ಅರಳಿಸುತ್ತದೆ. ಹೃದಯ ವೈಶಾಲ್ಯವನ್ನು ತುಂಬಿಸಿಕೊಡುತ್ತದೆ. ಭಾರತದ ಸಾಂಸ್ಕøತಿಕ ಮೌಲ್ಯಗಳನ್ನು ಕಲೆಗಳು ಸಾರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಾಜಿ ಸಂಸದೀಯ ಕಾರ್ಯದರ್ಶಿ, ಮಾಜಿ ಶಾಸಕಿ ಟಿ.ಶಕುಂತಳ ಶೆಟ್ಟಿ ಅವರು ಹೇಳಿದರು.
ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ಸಹಕಾರದೊಂದಿಗೆ ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಆಯೋಜಿಸಿದ ಯಕ್ಷಗಾನ ತರಬೇತಿ ಶಿಬಿರ ಮತ್ತು ರಂಗತರಬೇತಿ ಶಿಬಿರದ ಭಾನುವಾರ ನಡೆದ ಸಮಾರೋಪ ಸಮಾರಂಭ `ರಂಗ-ಯಕ್ಷ-ಉತ್ಸವ'ವನ್ನು ಚೆಂಡೆ ನುಡಿಸಿ ಉದ್ಘಾಟಿಸಿ ಮಾತನಾಡಿದರು.
ನಾಟಕ ಪ್ರದರ್ಶನದಿಂದ ಮನೋರಂಜನೆಯ ಜೊತೆಗೆ ಸಾಮಾಜಿಕ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತದೆ. ಸಾಮಾಜಿಕ ಚಿಂತನೆಯನ್ನು ಹುಟ್ಟು ಹಾಕುತ್ತದೆ. ಕನ್ನಡ ಭಾಷೆಯ ಮೇಲಿನ ಪ್ರೀತಿಯೊಂದಿಗೆ ಸಂಸ್ಕøತಿ ಮತ್ತು ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ ಎಂದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಯಕ್ಷಗಾನದ ಪಾತ್ರ ಹಿರಿದು ಎಂದ ಅವರು ಕಾಸರಗೋಡಿನಲ್ಲಿ ನಿರಂತರ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಾಷೆ, ಸಾಹಿತ್ಯ, ಸಂಸ್ಕøತಿಯನ್ನು ಇನ್ನೂ ಉಳಿಸಿಕೊಳ್ಳಲು ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಕಾರ್ಯ ಶ್ಲಾಘನೀಯ ಎಂದರು.
ಆಸಕ್ತಿ ಬೆಳೆಸಿಕೊಳ್ಳಬೇಕು : ನಾಟಕಕ್ಕೆ ಇರುವ ಸೊಗಸು ಬೇರೆ ಯಾವುದಕ್ಕೂ ಇಲ್ಲ. ಯಕ್ಷಗಾನ-ನಾಟಕ ಕಾಸರಗೋಡಿನ ಉಸಿರು. ಸಂಸ್ಕøತಿಯ ಉಸಿರು ಕೂಡ ಹೌದು. ನಾಟಕ, ಯಕ್ಷಗಾನ ಬಿಟ್ಟು ಬದುಕಲು ಸಾಧ್ಯವಿಲ್ಲ. ಹುಟ್ಟಿನಿಂದಲೇ ಎಲ್ಲರಲ್ಲೂ ಪ್ರತಿಭೆ ಇರುತ್ತದೆ. ಆದರೆ ಪ್ರತಿಭೆಯನ್ನು ಅನಾವರಣಗೊಳಿಸಲು ಪೆÇ್ರೀತ್ಸಾಹ ಬೇಕು. ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ ಪರಿಚಯಿಸುವ ಕೆಲಸ ನಡೆಯಬೇಕಾಗಿದೆ. ಪುಸ್ತಕ ಮಾತ್ರ ಕಲಿಕೆಯಾಗಬಾರದು. ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಲು ಕಲೆ, ಸಾಹಿತ್ಯದಲ್ಲೂ ಆಸಕ್ತಿಯನ್ನು ವಹಿಸಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಡಾ.ಮೀನಾಕ್ಷಿ ರಾಮಚಂದ್ರ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ಕವಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅವರು ಸಮಾರೋಪ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಾಮೋದರ ಶೆಟ್ಟಿ, ಕಾಸರಗೋಡು ಜಿಲ್ಲಾ ಪಂಚಾಯತಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನ ಅಧ್ಯಕ್ಷ ರಾಮಕೃಷ್ಯ ಮಯ್ಯ, ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಮೊದಲಾದವರು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಾಂಸ್ಕøತಿಕ ರಾಯಭಾರಿ ಕೆ.ಎನ್.ವೆಂಕಟ್ರಮಣ ಹೊಳ್ಳ ಅವರನ್ನು `ಗಡಿನಾಡಿನ ಯಕ್ಷಭೂಷಣ' ಬಿರುದನ್ನಿತ್ತು ಗೌರವಿಸಲಾಯಿತು. ಯಕ್ಷ ಗುರು ಜಯರಾಮ ಪಾಟಾಳಿ ಪಡುಮಲೆ ಅವರಿಗೆ ಶಿಷ್ಯ ವೃಂದದವರು ಗುರುವಂದನೆ ಸಲ್ಲಿಸಿದರು. ರಂಗತರಬೇತುದಾರರಾದ ರಂಜಾನ್ ಸಾಬ್ ಉಳ್ಳಾಗಡ್ಡಿ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.
ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಲತಾ ಪ್ರಕಾಶ್ ರಾವ್, ರವೀಂದ್ರ ರೈ ಮಲ್ಲಾವರ ಕಾರ್ಯಕ್ರಮ ನಿರ್ವಹಿಸಿದರು. ಸಂದೇಶ್ ಕೋಟೆಕಣಿ ವಂದಿಸಿದರು.
ಶಿಬಿರದ ವಿದ್ಯಾರ್ಥಿಗಳಿಂದ ಕುವೆಂಪು ಅವರ ಬೊಮ್ಮನ ಹಳ್ಳಿಯ ಕಿಂದರಿ ಜೋಗಿ, ರಂಜಾನ್ ಸಾಬ್ ಉಳ್ಳಾಗಡ್ಡಿ ರಚಿಸಿ, ನಿರ್ದೇಶಿಸಿದ ಶ್ರೀಪಥ ನಾಟಕ ಮತ್ತು ಜಯರಾಮ ಪಾಟಾಳಿ ಪಡುಮಲೆ ಅವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ಬಯಲಾಟ ಜರಗಿತು.

