ಬಂದೂಕು ಠಾಣೆಗೆ ಹಾಜರುಪಡಿಸಲು ಆದೇಶ
0
ಮಾರ್ಚ್ 11, 2019
ಕಾಸರಗೋಡು: ಲೋಕಸಭೆ ಚುನಾವಣೆ ಘೋಷಿಸಿರುವ ಹಿನ್ನೆಲೆಯಲ್ಲಿ ಪರವಾನಗಿ ಹೊಂದಿರುವ ಬಂದೂಕು ಇರಿಸಿಕೊಂಡಿರುವವರು ಮಾ.15ರ ಮುಂಚಿತವಾಗಿ ಸಮೀಪದ ಪೊಲೀಸ್ ಠಾಣೆಗೆ ಆಯುಧ ಹಾಜರುಪಡಿಸಿ, ರಶೀದಿ ಪಡೆದು, ಜಿಲ್ಲಾಧಿಕಾರಿ ಕಚೇರಿಯ"ಡಿ"ವಿಭಾಗಕ್ಕೆ ಸಲ್ಲಿಸಬೇಕು. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಮುಂಗಡ ಸೂಚನೆಗಳಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.




