HEALTH TIPS

ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿಧಿವಶ: ರಾಷ್ಟ್ರೀಯ ಶೋಕಾಚರಣೆ; ಇಂದು ಸಂಜೆ ಪಣಜಿಯಲ್ಲಿ ಅಂತ್ಯಕ್ರಿಯೆ

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಿವಶರಾಗಿದ್ದಾರೆ. ಅರ್ಬುದ ರೋಗದಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾಗಿದ್ದಾರೆ. 63 ವರ್ಷದ ಪರಿಕ್ಕರ್ ಅವರು ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ದೆಹಲಿಯ ಏಮ್ಸ್ ನಿಂದ ಚಿಕಿತ್ಸೆ ಪಡೆದು ವಾಪಸಾಗಿ ಸರ್ಕಾರ ನಡೆಸಿದ್ದರು. ಶನಿವಾರ ದಿಢೀರ್ ಸುಸ್ತಾಗಿದ್ದರಿಂದ ಅವರಿಗೆ ಮತ್ತೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ದುರ್ದೈವ ವಿಧಿವಶರಾಗಿದ್ದಾರೆ. ಇಂದು ಸಂಜೆ ಅಂತ್ಯಸಂಸ್ಕಾರ: ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಶೋಕವನ್ನು ಘೋಷಿಸಿದೆ. ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 9:00-10:30 ವರೆಗೆ ಗೋವಾದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ. ಸಂಜೆ 4 ಗಂಟೆ ವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಸಾರ್ವಜನಿಕ ದರ್ಶನದ ಬಳಿಕ ಮೆರವಣಿಗೆ ಮೂಲಕ ಪಣಜಿಯಲ್ಲಿರುವ ಎಸ್ ಎಜಿ ಗ್ರೌಂಡ್ಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries