ದುರ್ಗಾಪೂಜೆ
0
ಮಾರ್ಚ್ 19, 2019
ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯದಂಗವಾಗಿ ಮಾರ್ಚ್ 22 ರಂದು ಶುಕ್ರವಾರ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ದುರ್ಗಾ ಪೂಜೆ ಜರಗಲಿದೆ.
ಬೆಳಗ್ಗೆ 8 ಕ್ಕೆ ಗಣಪತಿ ಹವನ, ರಾತ್ರಿ 8 ರಿಂದ ಸಾಮೂಹಿಕ ಪ್ರಾರ್ಥನೆಯೊಂದಿಗೆ ದುರ್ಗಾಪೂಜೆ, ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಕಾರ್ತಿಕ ಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೀರ್ಣೋದ್ಧಾರ ಕಾರ್ಯದಲ್ಲಿ ಸಂಪೂರ್ಣ ಸಹಕರಿಸುವಂತೆ ವಿನಂತಿಸಲಾಗಿದೆ.

