HEALTH TIPS

ತನು ಕನ್ನಡ-ಮನ ಕನ್ನಡ ನಿರಂತರವಾಗಿರಲಿ : ಗೋಕುಲದಾಸ್ ಕಾಮತ್

ರಂಗಚಿನ್ನಾರಿಯ ತನು ಕನ್ನಡ ಮನ ಕನ್ನಡ ಕಾರ್ಯಕ್ರಮ ಉದ್ಘಾಟನೆ ಮುಳ್ಳೇರಿಯ: ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಕಳೆದ ಹದಿನಾಲ್ಕು ವರ್ಷಗಳಿಂದ ಕನ್ನಡ ನಾಡು-ನುಡಿ, ಸಂಸ್ಕøತಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ರಂಗಚಿನ್ನಾರಿ ಸಂಸ್ಥೆಯು ಇದೇ ಪ್ರಪ್ರಥಮವಾಗಿ ಚಂದ್ರಗಿರಿ ನದಿ ದಾಟಿ ಕಾಂಞಂಗಾಡ್‍ನಲ್ಲಿ ಕನ್ನಡ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಕಾಂಞಂಗಾಡ್‍ನ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರೂ, ನಗರಸಭಾ ಸದಸ್ಯರೂ ಆಗಿರುವ ಗೋಕುಲದಾಸ್ ಕಾಮತ್ ಹೇಳಿದರು. ಅವರು ಕಾಸರಗೋಡಿನ ಸಾಂಸ್ಕøತಿಕ-ಸಾಹಿತ್ಯಿಕ ಸಂಸ್ಥೆ ರಂಗಚಿನ್ನಾರಿ ಹಾಗು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು, ಮೇಘರಂಜನಾ ಚಂದ್ರಗಿರಿ ಸಹಯೋಗದೊಂದಿಗೆ ಕಾಂಞಂಗಾಡಿನ ಕೃಷ್ಣ ಮಂದಿರದಲ್ಲಿ ಇತ್ತೀಚೆಗೆ ಏರ್ಪಡಿಸಿದ ಕನ್ನಡ ಸಾಂಸ್ಕøತಿಕ ವೈವಿಧ್ಯ `ತನು ಕನ್ನಡ-ಮನ ಕನ್ನಡ' ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಗಡಿ ಪ್ರದೇಶದಲ್ಲಿರುವಷ್ಟು ಕನ್ನಡ ಸಂಸ್ಥೆಗಳು, ಕನ್ನಡ ಸಾಂಸ್ಕøತಿಕ ವೈವಿ`À್ಯಗಳು ಪ್ರಾಯಶ: ಕರ್ನಾಟಕದ ಯಾವ ಭಾಗದಲ್ಲೂ ಇರಲಾರದು. ಕೇರಳದ ಈ ಪ್ರದೇಶದಲ್ಲಿ ಕನ್ನಡ ಪರ ಕೆಲಸಗಳನ್ನು ನಿರಂತರವಾಗಿ ನಡೆದುಕೊಂಡು ಬರುವುದು ಅಷ್ಟು ಸುಲಭದ ಕೆಲಸವಲ್ಲ. ಆ ನಿಟ್ಟಿನಲ್ಲಿ ರಂಗಚಿನ್ನಾರಿ ಸಂಸ್ಥೆ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಅಧ್ಯಕತೆಯನ್ನು ವಹಿಸಿ ಮಾತನಾಡಿದ ಖ್ಯಾತ ವೈದ್ಯರೂ, ಕನ್ನಡ ಸಾಹಿತ್ಯ ಪರಿಷತ್ತಿನ ಕಾಂಞಂಗಾಡು ಘಟಕದ ಅಧ್ಯಕ್ಷರೂ ಆಗಿರುವ ಡಾ.ಯು.ಬಿ.ಕುಣಿಕುಳ್ಳಾಯ ಅವರು ಮಾತನಾಡಿ, ಕಾಸರಗೋಡಿನಲ್ಲಿ ಈ ಹಿಂದೆ ಇದ್ದ ಕನ್ನಡದ ಚಟುವಟಿಕೆಗಳು ಕಾಲಕ್ರಮೇಣ ಕ್ಷೀಣಿಸುತ್ತಿರುವ ಈ ಹೊತ್ತು ಇಂತಹ ಕಾರ್ಯಕ್ರಮಗಳು ಮತ್ತಷ್ಟು ಹುರುಪು, ಉತ್ಸಾಹ ನೀಡುತ್ತದೆ ಎಂದರು. ಗೌರವ ಅತಿಥಿಯಾಗಿ ಮಾತನಾಡಿದ ಹೊಸದುರ್ಗ ಕನ್ನಡ ಸಂಘದ ಅಧ್ಯಕ್ಷ ಹೆಚ್.ಎಸ್.ಭಟ್ ಅವರು ಕನ್ನಡದ ಕೆಲಸಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕಾಗಿ ತಮ್ಮೆಲ್ಲ ಸಹಕಾರವನ್ನು ರಂಗಚಿನ್ನಾರಿ ಸಂಸ್ಥೆಗೆ ನೀಡುವುದಾಗಿ ತಿಳಿಸಿದರು. ಅತಿಥಿಗಳಾಗಿ ಕಾಂಞಂಗಾಡು ನಗರಸಭಾ ಸದಸ್ಯೆ ಸುಕನ್ಯಾ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರು, ನಗರಸಭಾ ಸದಸ್ಯರೂ ಆದ ಹೆಚ್.ಆರ್.ಶ್ರೀಧರ ಹೆಗ್ಡೆ, ರಂಗಚಿನ್ನಾರಿ ಸಂಸ್ಥೆಯ ನಿರ್ದೇಶಕರಾದ ಕಾಸರಗೋಡು ಚಿನ್ನಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ `ಭಜನಾಂತರಂಗ' ಕಾರ್ಯಕ್ರಮವನ್ನು ಖ್ಯಾತ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಕನ್ನಡ ಭಾಷೆಯ ಬೆಳವಣಿಗೆಗೆ ದಾಸ ಕೀರ್ತನೆ ನೀಡಿರುವ ಕೊಡುಗೆ ಅತ್ಯಂತ ಮಹತ್ತದ್ದು ಎಂದರು. ಶ್ರೀ ಕೃಷ್ಣ ಭಜನಾ ಸಂಘ ಕಾಂಞಂಗಾಡು, ಸರ್ವಮಂಗಳಾ ಮಹಿಳಾ ಭಕ್ತವೃಂದ ಹೊಸದುರ್ಗ, ಶ್ರೀ ಮುತ್ತಪ್ಪ ಮಹಿಳಾ ಭಕ್ತ ವೃಂದ ಪಾರೆಕಟ್ಟೆ ಇವರಿಂದ ದಾಸ ಸಂಕೀರ್ತನೆ ಜರಗಿತು. ಅಂತಾರಾಷ್ಟ್ರೀಯ ಗಾಯಕ ರವೀಂದ್ರ ಪ್ರಭು, ಗಡಿನಾಡಿನ ಅಭಿಮಾನ ಸಂಗೀತ ಕಲಾವಿದ ಕಿಶೋರ್ ಪೆರ್ಲ, ಮೇಘನಾ ಕೊಪ್ಪಲ್ ಅವರಿಂದ `ಜಯಹೇ ಕನ್ನಡ ತಾಯೇ' ಭಕ್ತಿಭಾವ ಜನಪದ ಗೀತೆಗಳ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ತಬ್ಲಾದಲ್ಲಿ ಅಭಿಜಿತ್ ಶೆಣೈ, ರಿದಂ ಪೇಡ್‍ನಲ್ಲಿ ರಾಜೇಶ್, ಆರ್ಗನ್‍ನಲ್ಲಿ ಪುರುಷೋತ್ತಮ ಕೊಪ್ಪಲ್ ಸಹಕರಿಸಿದ್ದರು. ಪ್ರಾಸ್ತಾವಿಕ ಮಾತನಾಡಿದ ರಂಗಚಿನ್ನಾರಿ ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಮುಂದಿನ ದಿನಗಳಲ್ಲಿ ಮೇಘ ರಂಜನಾ ಚಂದ್ರಗಿರಿ ಸಂಸ್ಥೆಯ ಸಹಯೋಗದೊಂದಿಗೆ ಹಲವಾರು ಕನ್ನಡ ಪರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದೆಂದು ತಿಳಿಸಿ ಸಂಸ್ಥೆಯ ಲಾಂಛನ ಬಿಡುಗಡೆಗೊಳಿಸಿದರು. ಅಂಕಿತಾ, ರಿತಿಕಾ, ಸನ್ನಿಧಿ, ವಿಸ್ಮಯ, ರಿತಿಕಾ ರಾವ್, ಸ್ನೇಹಾ, ಸಮೀಕ್ಷಾ ಅವರಿಂದ ಜಾನಪದ ನೃತ್ಯಗಳು ಪ್ರದರ್ಶಿಸಲ್ಪಟ್ಟಿತು. ಅಂಕಿತಾ, ಅನುಷಾ ಪ್ರಾರ್ಥನೆ ಹಾಡಿದರು. ಪುರುಷೋತ್ತಮ ಕೊಪ್ಪಲ್ ಸ್ವಾಗತಿಸಿ, ರೂಪಕಲಾ ಕೊಪ್ಪಲ್ ವಂದಿಸಿದರು. ರಂಜನ್ ಕೊಪ್ಪಲ್ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries