HEALTH TIPS

ಮೌನ ನಾಮಜಪ ಮೂರನೇ ದಿನ ಯಶಸ್ವಿ

ಮಂಜೇಶ್ವರ: ಪಾವೂರು ಸಮೀಪದ ಕೊಪ್ಪಳ ಶಿವಪುರದ ಶ್ರೀಮಹಾ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮಾರ್ಚ್ 4 ಸೊಮವಾರದಿಂದ ಯೋಗಾಚಾರ್ಯ ಪುಂಡರೀಕಾಕ್ಷ ಬೆಳ್ಳೂರು ಅವರ ನೇತೃತ್ವದಲ್ಲಿ ಆರಂಭಗೊಂಡಿರುವ 48 ದಿನಗಳ ಉದಯಾಸ್ತಮಾನ ಮೌನ ನಾಮಜಪದ ಮೂರನೇ ದಿನವಾದ ಬುಧವಾರ ಬೆಳಿಗ್ಗೆ ಗಣಪತಿ ಹವನ, ಬಳಿಕ ಪುಂಡರೀಕಾಕ್ಷ ಯೋಗಾಚಾರ್ಯರವರಿಂದ ಮೌನ ನಾಮ ಜಪ, ಭಕ್ತರಿಂದ ಸಾವಿರ ಸಂಖ್ಯೆಯಲ್ಲಿ ನಾಮ ಜಪ ನಡೆಯಿತು. ಸಂಜೆ ನಮ್ಮವರು ಕಲಾ ತಂಡ ಕಣ್ವತೀರ್ಥ ಇವರು ಭಜನಾ ಸಂಕೀರ್ತನೆ ನಡೆಸಿದರು. ಸಂಜೆ 6.30 ಕ್ಕೆ ಪುಂಡರೀಕಾಕ್ಷ ಯೋಗಾಚಾರ್ಯ ರಿಂದ ಸತ್ಸಂಗ ನಡೆಯಿತು ಈ ಸಂದರ್ಭದಲ್ಲಿ ಅಥಿತಿಗಳಾಗಿ ಮಧುಸೂದನ ಆಚಾರ್ಯ ಕಣ್ವತೀರ್ಥ, ಗೋಪಾಲ ಶೆಟ್ಟಿ ಅರಿಬೈಲು, ಸುಬ್ಬ ಗುರುಸ್ವಾಮಿ ಪಾವೂರು, ವಾಸು ಕುಲಾಲ್ ಭಾಗವಹಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries