HEALTH TIPS

ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕ್‍ನ ಕುಂಜತ್ತೂರು ಶಾಖೆ ಸ್ಥಳಾಂತರ

ಮಂಜೇಶ್ವರ: ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕ್‍ನ ಕುಂಜತ್ತೂರಿನ ಸಾಯಂ(ಈವಿನಿಂಗ್ ಬ್ರಾಂಚ್) ಶಾಖೆ ತಲಪಾಡಿಯಲ್ಲಿರುವ ನೂತನ ಕಟ್ಟಡಕ್ಕೆ ಇತ್ತೀಚೆಗೆ ಸ್ಥಳಾಂತರಗೊಂಡಿತು. ಶಾಖೆಯ ಔಪಚಾರಿಕ ಉದ್ಘಾಟನೆಯನ್ನು ನಿವೃತ್ತ ಉಪಜಿಲ್ಲಾಧಿಕಾರಿ ಹಾಗು ಹಿರಿಯ ಸಹಕಾರಿ ವಾಸುದೇವನ್ ನಿರ್ವಹಿಸಿದರು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕ್‍ನ ಕಾರ್ಯದರ್ಶಿ ರಾಜನ್ ನಾಯರ್ ವಹಿಸಿದರು. ಶಾಖೆಯ ರಕ್ಷಣಾ ಲಾಕರನ್ನು ಉದ್ಯಮಿ ಪಿ.ಕೆ.ರವೀಂದ್ರನಾಥ್ ಶೆಟ್ಟಿ ಉದ್ಘಾಟಿಸಿದರು. ಗ್ರಾಹಕರ ಹೆಚ್ಚಿನ ಅನುಕೂಲತೆಗಾಗಿ ಕುಂಜತ್ತೂರಿನ ಹಳೆಯ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಗ್ರಾಹಕರ ಬೇಡಿಕೆಯಂತೆ ಸ್ಥಳಾಂತರಗೊಳಿಸಿರುವುದಾಗಿದೆ ಮಂಜೇಶ್ವರ ಸಹಕಾರಿ ಬ್ಯಾಂಕ್‍ನ ಸಂಬಂಧಪಟ್ಟವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries