HEALTH TIPS

ತಲಪಾಡಿಯಲ್ಲಿ ಗ್ಯಾಸ್ ಸೋರಿಕೆ: ಆತಂಕದ ವಾತಾವರಣ

ಮಂಜೇಶ್ವರ: ತಲಪಾಡಿ ಆರ್ ಟಿ ಒ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರೊಂದರಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಮಂಗಳವಾರ ಸಂಜೆ 6 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಟ್ಯಾಂಕರಿನ ಮೇಲ್ಬಾಗದಿಂದ ಗ್ಯಾಸ್ ಮೇಲಕ್ಕೆ ಚಿಮ್ಮುತ್ತಿರುವುದು ಆತಂಕಕ್ಕೆ ಕಾರಣವಾಯಿತು. ಕೂಡಲೇ ಮಂಜೇಶ್ವರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಆಗಮಿಸಿ ಸುರಕ್ಷತೆಗೆ ಕ್ರಮ ಕೈಗೊಂಡಿದ್ದಾರೆ. ಕಾಸರಗೋಡು ಭಾಗದಿಂದ ಆಗಮಿಸುತ್ತಿರುವ ವಾಹನಗಳನ್ನು ತೂಮಿನಾಡಿನಲ್ಲಿ ತಡೆದು ಒಳ ರಸ್ತೆಯಿಂದಾಗಿ ತಲಪಾಡಿ ಭಾಗಕ್ಕೆ ಕಳುಹಿಸಲಾಯಿತು. ವಿದ್ಯುತ್ ಸಂಪರ್ಕವನ್ನು ಸಂಪೂರ್ಣವಾಗಿ ವಿಚ್ಚೇಧಿಸಲಾಗಿದೆ. ಘಟನಾ ಸ್ಥಳದಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಗಿಸಲಾಗಿದೆ. ಸೋರಿಕೆಯಿಂದ ಆಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಟ್ಯಾಂಕರ್ ಸಮೀಪದ ವ್ಯಾಪಾರ ಕೇಂದ್ರಗಳನ್ನು ಮುಚ್ಚುಗಡೆಗೊಳಿಸಲಾಯಿತು. ಮಂಗಳೂರಿನಿಂದ ಕಾಸರಗೋಡು ಭಾಗಕ್ಕೆ ಆಗಮಿಸುವ ಟ್ಯಾಂಕರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿದೆ. ಮಂಗಳೂರಿನಿಂದ ತಜ್ಞರು ಆಗಮಿಸಿ ಕ್ರಮ ಕೈಗೊಳ್ಳಲಾಗುವುದಾಗಿ ನಿರೀಕ್ಷಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries