ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವಿಶೇಷ ಅಸೆಂಬ್ಲಿ ನಡೆಸಿ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ಯೋಗ ದಿನಾಚರಣೆಯ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು. ಬಳಿಕ ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮಾಅವರು ಕೆಲವು ಸರಳ ವ್ಯಾಯಾಮ ಹಾಗೂ ಯೋಗಾಸನಗಳನ್ನು ಪ್ರದರ್ಶನ ಮಾಡುವ ಮೂಲಕ ಮಕ್ಕಳಿಗೆ ತಿಳಿಸಿಕೊಟ್ಟರು. ಶಾಲಾ ಶಿಕ್ಷಕಿಯರಾದ ಸೌಮ್ಯ ಪಿ, ನಯನ ಯಂ, ಅಶ್ವಿನಿ ಎಲಿಯಾಣ, ರಮೀಝ ಉಪಸ್ಥಿತರಿದ್ದು ಸಹಕರಿಸಿದರು.


