HEALTH TIPS

ನೀರ್ಚಾಲಿನಲ್ಲಿ ಮಳೆಗಾಲದ ಮಹೋನ್ನತ ತಾಳಮದ್ದಳೆ 28 ರಂದು


    ಬದಿಯಡ್ಕ: ನೀರ್ಚಾಲಿನ ಶ್ರೀವಿಘ್ನೇಶ್ವರ ಯಕ್ಷಗಾನ ಕಲಾಸಂಘದ ನೇತೃತ್ವದಲ್ಲಿ ಮಳೆಗಾಲದ ಮಹೋನ್ನತ ಯಕ್ಷಗಾನ ತಾಳಮದ್ದಳೆಯು ಜು.28 ರಂದು ಭಾನುವಾರ ಅಪರಾಹ್ನ 2 ರಿಂದ ನೀರ್ಚಾಲು ಮಹಾಜನ ಶಾಲಾ ವಠಾರದಲ್ಲಿ ನಡೆಯಲಿದೆ.
    ಶಲ್ಯ ಸಾರಥ್ಯ-ನಿರ್ಗಮನ ಪ್ರಸಂಗ ಆಖ್ಯಾನದ ತಾಳಮದ್ದಳೆ ಕೂಟವನ್ನು ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ದೀಪ ಬೆಳಗಿಸಿ ಉದ್ಘಾಟಿಸುವರು. ಬಳಿಕ ನಡೆಯುವ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಪುತ್ತಿಗೆ ರಘುರಾಮ ಹೊಳ್ಳ, ಚೆಂಡೆ-ಮದ್ದಳೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅಡೂರು ಲಕ್ಷ್ಮೀನಾರಾಯಣ ರಾವ್ ಭಾಗವಹಿಸುವರು. ಮುಮ್ಮೇಳದಲ್ಲಿ ಶಂಭು ಶರ್ಮ ವಿಟ್ಲ, ರಾಧಾಕೃಷ್ಣ ಕಲ್ಚಾರ್, ಪೆರ್ಮುದೆ ಜಯಪ್ರಕಾಶ ಶೆಟ್ಟಿ, ಪಕಳಕುಂಜ ಶ್ಯಾಂ ಭಟ್, ಹರೀಶ ಬಳಂತಿಮೊಗರು, ಬಾಲಕೃಷ್ಣ ಆಚಾರ್ಯ ನೀರ್ಚಾಲು ವಿವಿಧ ಪಾತ್ರಗಳನ್ನು ನಿರ್ವಹಿಸುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries