HEALTH TIPS

ತಾಂತ್ರಿಕ ದೋಷ ನಿವಾರಣೆ, ಚಂದ್ರಯಾನ 2 ಉಡಾವಣೆಗೆ ಸಿದ್ಧ: ಇಸ್ರೋ ಮಾಜಿ ಮುಖ್ಯಸ್ಥ ಕಿರಣ್ ಕುಮಾರ್

     
     ಶ್ರೀಹರಿಕೋಟಾ: ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಯೋಜನೆ ಚಂದ್ರಯಾನ 2 ಯೋಜನೆಯ ತಾಂತ್ರಿಕ ದೋಷ ನಿವಾರಣೆಯಾಗಿದ್ದು, ನೌಕೆ ಸಂಪೂರ್ಣ ಸಿದ್ಧವಾಗಿದೆ ಎಂದು ಮಾಜಿ ಇಸ್ರೋ ಮುಖ್ಯಸ್ಥ ಕಿರಣ್ ಕುಮಾರ್ ಹೇಳಿದ್ದಾರೆ.
       ಈ ಕುರಿತಂತೆ ಸುದ್ದಿಸಂಸ್ಛೆಯೊಂದಿಗೆ ಮಾತನಾಡಿರುವ ಕಿರಣ್ ಕುಮಾರ್ ಅವರು, ಈ ಹಿಂದೆ ಕಾಣಿಸಿಕೊಂಡಿದ್ದ ಎಲ್ಲ ತಾಂತ್ರಿಕದೋಷಗಳನ್ನು ನಿವಾರಣೆ ಮಾಡಿದ್ದಷ್ಟೇ ಅಲ್ಲದೇ ಪ್ರಾಯೋಗಿಕ ಪರೀಕ್ಷೆ ಕೂಡ ನಡೆಸಲಾಗಿದೆ. ಎಲ್ಲ ಪರೀಕ್ಷೆಗಳೂ ಯಶಸ್ವಿಯಾಗಿದ್ದು, ನಾವು ಉಡಾವಣೆಗೆ ಸಿದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.
      ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ರೋ ಕೂಡ ಟ್ವೀಟ್ ಮಾಡಿದ್ದು, ಚಂದ್ರಯಾನ 2 ನೌಕೆಯನ್ನು ಹೊತ್ತು ನಭಕ್ಕೆ ಚಿಮ್ಮಲಿರುವ ರಾಕೆಟ್ ಬಾಹುಬಲಿ ಸಮರ್ಥವಾಗಿದೆ.  ಚಂದ್ರಯಾನ2 ಮಿಷನ್‍ನ ಉಡ್ಡಯನ ರಾಕೇಟ್ ನಲ್ಲಿನ ತಾಂತ್ರಿಕ ದೋಷವನ್ನು ಪರೀಕ್ಷಿಸಿ, ಸರಿಪಡಿಸಲಾಗಿದ್ದು, ಅದರ ಕಾರ್ಯಕ್ಷಮತೆ ಸಮರ್ಥವಾಗಿದೆ. ಉಡ್ಡಯನಕ್ಕೆ ಪೂರ್ವ ತಯಾರಿ ಪೂರ್ಣಗೊಂಡಿದೆ ಎಂದು ಟ್ವೀಟ್ ಮಾಡಿದೆ.
    ಇಂದು ಚಂದ್ರಯಾನ 2 ಉಡ್ಡಯನ ಮಾಡಲು ಇಸ್ರೊ ನಿರ್ಧರಿಸಿದೆ. ಮಧ್ಯಾಹ್ನ 2.43ಕ್ಕೆ ನೌಕೆಯನ್ನು ಹೊತ್ತ ರಾಕೆಟ್ ಬಾಹುಬಲಿ ನಭಕ್ಕೆ ಚಿಮ್ಮಲಿದೆ.
    ಈ ಮೊದಲು ಜುಲೈ 15ರಂದು ನೌಕೆ ಉಡ್ಡಯನಕ್ಕೆ ಯೋಜಿಸಲಾಗಿತ್ತು. ಆದರೆ ಉಡ್ಡಯನಕ್ಕೆ 56 ನಿಮಿಷಗಳು ಬಾಕಿ ಇರುವಾಗ ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಂಡುಬಂದದ್ದರಿಂದ ರದ್ದುಪಡಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಹೊಸ ದಿನಾಂಕವನ್ನು ಇಸ್ರೊ ಪ್ರಕಟಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries