ವಾಂತಿಚ್ಚಾಲಿನಲ್ಲಿ 51ನೇ ವರ್ಷದ ಆಟಿಟೊಂಜಿ ಅಟ್ಟಣೆ-ಜಿ.ಕೆ.ಟ್ರಸ್ಟ್ ತುಳು ಸಂಸ್ಕøತಿಗೆ ಮಾದರಿ ಚಟುವಟಕೆ-ಎಂ.ಉಮೇಶ ಸಾಲ್ಯಾನ್
ಬದಿಯಡ್ಕ: ತುಳು ಭಾಷೆ, ಸಂಸ್ಕøತಿ ಸಂವರ್ಧನೆಗೆ ಪೂರಕ ಬದುಕು-ಕಾರ್ಯಕ್ರಮಗಳನ್ನು ಆಚರಣೆಗೆ ತರುವುದು ಜೀವನದ ಮಹತ್ವದ ಕೊಡುಗೆಯಾಗಿದೆ. ತುಳು ಲಿಪಿ ಸಂಶೋಧಕರಾದ ಡಾ.ವೆಂಕಟರಾಜ ಪುಣಿಚಿತ್ತಾಯರ ಕನಸುಗಳನ್ನು ವ್ಯಾಪಕಗೊಳಿಸಿ ನನಸುಗೊಳಿಸುತ್ತಿರುವ ಜಿ.ಕೆ.ಚಾರಿಟೇಬಲ್ ಟ್ರಸ್ಟ್ ನ ಚಟುವಟಿಕೆಗಳು ಸ್ತುತ್ಯರ್ಹವಾದುದು ಎಂದು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್ ಕಾಸರಗೋಡು ಅವರು ತಿಳಿಸಿದರು.
ವಾಂತಿಚ್ಚಾಲಿನ ಜಿ.ಕೆ.ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಭಾನುವಾರ ವಾಂತಿಚ್ಚಾಲಿನಲ್ಲಿ ಆಯೋಜಿಸಲಾದ 51ನೇ ವರ್ಷದ "ಆಟಿಟೊಂಜಿ ಅಟ್ಟಣೆ" ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚಾರಿಟೇಬಲ್ ಟ್ರಸ್ಟ್ ನ ಮೂಲಕ ತುಳುವಿನ ಸಮಗ್ರ ಸಾಹಿತಿಕ, ಸಾಂಸ್ಕøತಿಕ, ಜಾನಪದ ಆಚರಣೆ ನಂಬಿಕೆಗಳಿಗೆ ಪುನಶ್ಚೇತನ ನೀಡುತ್ತಿರುವುದು ಹೊಸ ತಲೆಮಾರಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದ ಅವರು ಸಾಂಸ್ಕøತಿಕ, ಜಾನಪದೀಯ ನಂಬಿಕೆ, ಆಚರಣೆಗಳ ಮರೆವು ಅಧಃಪತನದ ದಾರಿಯಾಗಿ ಅಶಾಂತಿಗೆ ಕಾರಣವಾಗುವುದು ಎಂದು ತಿಳಿಸಿದರು. ಕೇರಳ ತುಳು ಅಕಾಡೆಮಿ ಮೂಲಕ ಮುಂದಿನ ದಿನಗಳಲ್ಲಿ ತುಳು ಲಿಪಿ ಕಾರ್ಯಾಗಾರ ನಡೆಸಲಾಗುವುದು ಎಂದ ಅವರು ತುಳು ಭವನದ ನಿರ್ಮಾಣ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
ಡಾ.ಶ್ರೀನಿಧಿ ಸರಳಾಯ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ತುಳು ಲೇಖಕರ ಸಂಘದ ಅಧ್ಯಕ್ಷ ಸತೀಶ ಸಾಲಿಯಾನ್ ನೆಲ್ಲಿಕುಂಜೆ, ಪತ್ರಕರ್ತರಾದ ಜಯ ಮಣಿಯಂಪಾರೆ, ಅಖಿಲೇಶ್ ನಗುಮುಗಂ, ಮೀಡಿಯಾ ಕ್ಲಾಸಿಕಲ್ಸ್ ಕಾಸರಗೋಡಿನ ನಿರ್ದೇಶಕ ಶ್ರೀಕಾಂತ್ ನೆಟ್ಟಣಿಗೆ, ಕುಲಾಲ ಸಮಾಜ ಸುಧಾರಕ ಸಂಘ ಕಾಸರಗೋಡಿನ ಅಧ್ಯಕ್ಷ ಸುಂದರ ಕಟ್ನಡ್ಕ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಿಶನ್ ಮುದುಂಗಾರ್ ಕಟ್ಟೆ ಸ್ವಾಗತಿಸಿ, ದಿವ್ಯಪ್ರದೀಪ್ ಕಳತ್ತೂರು ವಂದಿಸಿದರು. ತೇಜಕುಮಾರ್ ಪುತ್ತೂರು ಹಾಗೂ ಹರ್ಷ ರೈ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.ಸಂಯೋಜಕ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6ರಿಂದ ಗಣಪತಿ ಹೋಮ, 9ರಿಂದ ಬಲೆ ತುಳು ಬರವು ಕಲ್ಪುಗ ತುಳು ಲಿಪಿ ಪರಿಚಯ ಕಾರ್ಯಕ್ರಮವನ್ನು ವಿದ್ಯಾಶ್ರೀ ಎಸ್.ಉಳ್ಳಾಲ್ ನಡೆಸಿದರು. ಮಧ್ಯಾಹ್ನ 12.30 ರಿಂದ ಮದ್ಮಯ ಮದ್ಮಲೆನ ಕುಸಲ್ದ ಎಸಲ್ ವಿಶೇಷ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಹರ್ಷ ರೈ ಪುತ್ರಕಳ ಹಾಗೂ ಶೃತಿ ಹರ್ಷ ರೈ ಪುತ್ರಕಳ ನಿರ್ವಹಿಸಿದರು.
ಸಂಜೆ 4ರಿಂದ ಸಮಾರೋಪ ಸಮಾರಂಭ ನಡೆಯಿತು. ಸಂಜೆ 5 ರಿಂದ ಆಟಿಕಳಂಜ ನಲಿಕೆ ವಿಶೇಷ ಪ್ರದರ್ಶನ ನಡೆಯಿತು. ರಾತ್ರಿ 8 ರಿಂದ ದೈವಗಳಿಗೆ ಅಗೆಲು ತಂಬಿಲ ಸೇವೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.
ಬದಿಯಡ್ಕ: ತುಳು ಭಾಷೆ, ಸಂಸ್ಕøತಿ ಸಂವರ್ಧನೆಗೆ ಪೂರಕ ಬದುಕು-ಕಾರ್ಯಕ್ರಮಗಳನ್ನು ಆಚರಣೆಗೆ ತರುವುದು ಜೀವನದ ಮಹತ್ವದ ಕೊಡುಗೆಯಾಗಿದೆ. ತುಳು ಲಿಪಿ ಸಂಶೋಧಕರಾದ ಡಾ.ವೆಂಕಟರಾಜ ಪುಣಿಚಿತ್ತಾಯರ ಕನಸುಗಳನ್ನು ವ್ಯಾಪಕಗೊಳಿಸಿ ನನಸುಗೊಳಿಸುತ್ತಿರುವ ಜಿ.ಕೆ.ಚಾರಿಟೇಬಲ್ ಟ್ರಸ್ಟ್ ನ ಚಟುವಟಿಕೆಗಳು ಸ್ತುತ್ಯರ್ಹವಾದುದು ಎಂದು ಕೇರಳ ತುಳು ಅಕಾಡೆಮಿ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್ ಕಾಸರಗೋಡು ಅವರು ತಿಳಿಸಿದರು.
ವಾಂತಿಚ್ಚಾಲಿನ ಜಿ.ಕೆ.ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಭಾನುವಾರ ವಾಂತಿಚ್ಚಾಲಿನಲ್ಲಿ ಆಯೋಜಿಸಲಾದ 51ನೇ ವರ್ಷದ "ಆಟಿಟೊಂಜಿ ಅಟ್ಟಣೆ" ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಚಾರಿಟೇಬಲ್ ಟ್ರಸ್ಟ್ ನ ಮೂಲಕ ತುಳುವಿನ ಸಮಗ್ರ ಸಾಹಿತಿಕ, ಸಾಂಸ್ಕøತಿಕ, ಜಾನಪದ ಆಚರಣೆ ನಂಬಿಕೆಗಳಿಗೆ ಪುನಶ್ಚೇತನ ನೀಡುತ್ತಿರುವುದು ಹೊಸ ತಲೆಮಾರಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದ ಅವರು ಸಾಂಸ್ಕøತಿಕ, ಜಾನಪದೀಯ ನಂಬಿಕೆ, ಆಚರಣೆಗಳ ಮರೆವು ಅಧಃಪತನದ ದಾರಿಯಾಗಿ ಅಶಾಂತಿಗೆ ಕಾರಣವಾಗುವುದು ಎಂದು ತಿಳಿಸಿದರು. ಕೇರಳ ತುಳು ಅಕಾಡೆಮಿ ಮೂಲಕ ಮುಂದಿನ ದಿನಗಳಲ್ಲಿ ತುಳು ಲಿಪಿ ಕಾರ್ಯಾಗಾರ ನಡೆಸಲಾಗುವುದು ಎಂದ ಅವರು ತುಳು ಭವನದ ನಿರ್ಮಾಣ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
ಡಾ.ಶ್ರೀನಿಧಿ ಸರಳಾಯ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ತುಳು ಲೇಖಕರ ಸಂಘದ ಅಧ್ಯಕ್ಷ ಸತೀಶ ಸಾಲಿಯಾನ್ ನೆಲ್ಲಿಕುಂಜೆ, ಪತ್ರಕರ್ತರಾದ ಜಯ ಮಣಿಯಂಪಾರೆ, ಅಖಿಲೇಶ್ ನಗುಮುಗಂ, ಮೀಡಿಯಾ ಕ್ಲಾಸಿಕಲ್ಸ್ ಕಾಸರಗೋಡಿನ ನಿರ್ದೇಶಕ ಶ್ರೀಕಾಂತ್ ನೆಟ್ಟಣಿಗೆ, ಕುಲಾಲ ಸಮಾಜ ಸುಧಾರಕ ಸಂಘ ಕಾಸರಗೋಡಿನ ಅಧ್ಯಕ್ಷ ಸುಂದರ ಕಟ್ನಡ್ಕ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಿಶನ್ ಮುದುಂಗಾರ್ ಕಟ್ಟೆ ಸ್ವಾಗತಿಸಿ, ದಿವ್ಯಪ್ರದೀಪ್ ಕಳತ್ತೂರು ವಂದಿಸಿದರು. ತೇಜಕುಮಾರ್ ಪುತ್ತೂರು ಹಾಗೂ ಹರ್ಷ ರೈ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.ಸಂಯೋಜಕ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6ರಿಂದ ಗಣಪತಿ ಹೋಮ, 9ರಿಂದ ಬಲೆ ತುಳು ಬರವು ಕಲ್ಪುಗ ತುಳು ಲಿಪಿ ಪರಿಚಯ ಕಾರ್ಯಕ್ರಮವನ್ನು ವಿದ್ಯಾಶ್ರೀ ಎಸ್.ಉಳ್ಳಾಲ್ ನಡೆಸಿದರು. ಮಧ್ಯಾಹ್ನ 12.30 ರಿಂದ ಮದ್ಮಯ ಮದ್ಮಲೆನ ಕುಸಲ್ದ ಎಸಲ್ ವಿಶೇಷ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಹರ್ಷ ರೈ ಪುತ್ರಕಳ ಹಾಗೂ ಶೃತಿ ಹರ್ಷ ರೈ ಪುತ್ರಕಳ ನಿರ್ವಹಿಸಿದರು.
ಸಂಜೆ 4ರಿಂದ ಸಮಾರೋಪ ಸಮಾರಂಭ ನಡೆಯಿತು. ಸಂಜೆ 5 ರಿಂದ ಆಟಿಕಳಂಜ ನಲಿಕೆ ವಿಶೇಷ ಪ್ರದರ್ಶನ ನಡೆಯಿತು. ರಾತ್ರಿ 8 ರಿಂದ ದೈವಗಳಿಗೆ ಅಗೆಲು ತಂಬಿಲ ಸೇವೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.



