HEALTH TIPS

ಎನ್.ಟಿ.ಯು ವತಿಯಿಂದ ಅಭಿನಂದನಾ ಸಮಾರಂಭ


       ಉಪ್ಪಳ:  ದೇಶಿಯ ಅಧ್ಯಾಪಕ ಪರಿಷತ್ ಎನ್.ಟಿ.ಯು ಮಂಜೇಶ್ವರ ಉಪಜಿಲ್ಲಾ ಸಮಿತಿಯ ಆಶ್ರಯದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಎಲ್.ಎಸ್.ಎಸ್ ಹಾಗೂ ಯು.ಎಸ್.ಎಸ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶನಿವಾರ ಜರಗಿತು.
     ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷ ಅರವಿಂದಾಕ್ಷ ಭಂಡಾರಿ ಅದ್ಯಕ್ಷತೆ ವಹಿಸಿದ್ದ ಸಮಾರಂಭವನ್ನು ಮೀಯಪದವು ಶಾಲಾ ಆಡಳಿತ ಸಲಹೆಗಾರ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಧರ ರಾವ್.ಆರ್.ಎಂ ಉದ್ಘಾಟಿಸಿದರು. ಎನ್.ಟಿ.ಯು ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಬಾಡೂರು, ನಿವೃತ್ತ ಮುಖ್ಯೋಪಾಧ್ಯಾಯ ಭಾಸ್ಕರ, ಎನ್.ಟಿ.ಯು ರಾಜ್ಯ ಸಮಿತಿ ಕಾರ್ಯದರ್ಶಿ ವೆಂಕಪ್ಪ ಶೆಟ್ಟಿ, ರಾಜ್ಯ ಸಮಿತಿ ಸದಸ್ಯ ವಿಘ್ನೇಶ್ವರ ಕೆದುಕೋಡಿ, ಶಾಲಾ ಮುಖ್ಯೋಪಾಧ್ಯಾಯ ಸುರೇಶ ಪಿ, ಎನ್.ಟಿ.ಯು ಜಿಲ್ಲಾ ಮಹಿಳಾ ಘಟಕದ ಸದಸ್ಯೆ ಶಶಿಕಲಾ ಟೀಚರ್ ಮಾತನಾಡಿ ಶುಭ ಹಾರೈಸಿದರು.
   ಈ ಸಂದರ್ಭ ಕಳೆದ  ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಪಡೆದ ವಿದ್ಯಾರ್ಥಿಗಳನ್ನು ಮತ್ತು ಎಲ್.ಎಸ್.ಎಸ್ ಹಾಗೂ ಯು.ಎಸ್.ಎಸ್ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿದ ವಿದ್ಯಾರ್ಥಿಗಳು ಮತ್ತು ಉಪಸ್ಥಿತರಿದ್ದ ಅಧ್ಯಾಪಕರು ಈ ಸಂದರ್ಭದಲ್ಲಿ ಸಂಘಟನೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ವಿದ್ಯಾರ್ಥಿನಿಯರಾದ ಶ್ರಾವ್ಯ ಮತ್ತು ವೈಶಾಲಿ ಪಾರ್ಥನೆಯನ್ನು ಹಾಡಿದರು. ಉಪಜಿಲ್ಲಾ ಪ್ರಧಾನ ಕಾರ್ಯದರ್ಶಿ ರಘುವೀರ್ ಸ್ವಾಗತಿಸಿ, ಚಂದ್ರಿಕ ಟೀಚರ್ ವಂದಿಸಿದರು. ಈಶ್ವರ ಕಿದೂರು ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries