ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಇತ್ತೀಚೆಗೆ ರಾಮಕೃಷ್ಣ ರಾವ್ ಸಭಾಂಗಣದಲ್ಲಿ ಜರಗಿತು.
ಮೀಂಜ ಗ್ರಾಮ ಪಂಚಾಯತಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಭಾಕರ್ ರೈ. ಅವರು ವಿದ್ಯಾಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಹಾನಿಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಧರ್ಮೇಂದ್ರ, ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ, ಶಾಲಾ ಮುಖ್ಯೋಪಾಧ್ಯಾಯ ಸುಧಾಕರ ವಿ. ಉಪಸ್ಥಿತರಿದ್ದರು. ಅಧ್ಯಾಪಕರಾದ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ, ಶಿಹಾಬುದ್ದೀನ್ ವಂದಿಸಿದರು. ಕಾರ್ಯಕ್ರಮವನ್ನು ಶಾಲಾ ಅಧ್ಯಾಪಕರಾದ ವಿಘ್ನೇಶ್ ಎಸ್. ನಿರೂಪಿಸಿದರು.


