ಮಂಜೇಶ್ವರ: ಕುಳೂರಿನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೀಂಜ ಗ್ರಾಮ ಪಂಚಾಯತಿ, ಹಳೆ ವಿದ್ಯಾರ್ಥಿ ಸಂಘ, ರಕ್ಷಕ-ಶಿಕ್ಷಕ ಸಂಘ, ಮೀಂಜ ಆಯುರ್ವೇದಿಕ್ ಹಾಗೂ ಹೋಮಿಯೋ ಆಸ್ಪತ್ರೆಗಳ ಜಂಟಿ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಮೀಂಜ ಗ್ರಾಮ ಪಂಚಾಯತಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಮೊಹಮ್ಮದ್ ಕುಂಞÂ್ಞ ಉದ್ಘಾಟಿಸಿದರು.ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ. ಪಿ ಅಧ್ಯಕ್ಷತೆ ವಹಿಸಿದ್ದರು. ಮೀಂಜ ಆಯುರ್ವೇದಿಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜಾರಾಮ ಡಿ. ಕೆ ಅವರು ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೀಂಜ ಹೋಮಿಯೋ ಆಸ್ಪತ್ರೆಯ ಡಾ. ನಮಿತಾ ಎಸ್, ಪೈವಳಿಕೆ ವಲಯದ ವೈದ್ಯಾಧಿಕಾರಿ ಡಾ. ಗಣೇಶ್, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮಾ ಪಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೆಲು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಅಧ್ಯಾಪಿಕೆ ರಮೀಝ ವಂದಿಸಿದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಆಯುರ್ವೇದ ಹಾಗೂ ಹೋಮಿಯೋಪತಿ ವೈದ್ಯಕೀಯ ಶಿಬಿರ ನಡೆಯಿತು. ಕುಳೂರು ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದು ಸಹಕರಿಸಿದರು.


