HEALTH TIPS

ಗೋಸಾಡ ಶ್ರೀ ಮಹಿಷಮರ್ಧಿನಿ ಕ್ಷೇತ್ರದಲ್ಲಿ ಸಭೆ

       
         ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ದಿನಿ ಕ್ಷೇತ್ರದಲ್ಲಿ ಸೇವಾ ಸಮಿತಿ ಹಾಗೂ ಶ್ರೀ ಮಹಿಷಮರ್ದಿನಿ ಜೀರ್ಣೋದ್ಧಾರ ಸಮಿತಿಯ ಜಂಟಿ ಸಭೆಯು ಜರಗಿತು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕುದ್ಕಾಡಿ ನಾರಾಯಣ ರೈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಎಂ.ಸಂಜೀವ ಶೆಟ್ಟಿ ಮೊಟ್ಟೆಕುಂಜ, ವಸಂತಿ ಟೀಚರ್ ಅಗಲ್ಪಾಡಿ, ಐತಪ್ಪ ಪಿ ಮವ್ವಾರು, ಜೀರ್ಣೋದ್ದಾರ ಸಮಿತಿಯ ಕೋಶಾಧಿಕಾರಿ ಶಂಕರನಾರಾಯಣ ಮಯ್ಯ ಬದಿಯಡ್ಕ,ಸೇವಾ ಸಮಿತಿಯ ಉಪಾಧ್ಯಕ್ಷ ರವೀಂದ್ರ ರೈ ಗೋಸಾಡ, ಸೇವಾ ಸಮಿತಿಯ ಕೋಶಾಧಿಕಾರಿ ಪರಮೇಶ್ವರ ಭಟ್, ಸೇವಾ ಸಮಿತಿಯ ಹಿರಿಯ ಸದಸ್ಯ ಅನಂತ ಭಟ್ ಗೋಸಾಡ ಉಪಸ್ಥಿತರಿದ್ದು ಜೀರ್ಣೋದ್ಧಾರದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.        ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ ರೈ ಎಂ. ಮಠದ ಮೂಲೆ ಈ ತನಕ ನಡೆದ ಜೀರ್ಣೋದ್ಧಾರ ಕಾರ್ಯದ ಬಗ್ಗೆ ವಿವರಗಳನ್ನು ನೀಡಿದರು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ನಾರಾಯಣ ಗೋಸಾಡ ಸ್ವಾಗತಿಸಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಸುಧಾಮ ಗೋಸಾಡ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries