HEALTH TIPS

ಜಲಶಕ್ತಿ ಅಭಿಯಾನ್: ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಕೇಂದ್ರ ಪ್ರತಿನಿಧಿ ಸಂವಾದ


        ಕಾಸರಗೋಡು:  ಸಮಗ್ರ ಜಲನೀತಿ ರಚಿಸುವ ನಿಟ್ಟಿನಲ್ಲಿ ಮತ್ತು ಜನಶಕ್ತಿ ಅಭಿಯಾನ ಪ್ರಕಾರ ಸ್ಥಿತಿಗತಿ ಅವಲೋಕನ ನಡೆಸುವ ನಿಟ್ಟಿನಲ್ಲಿ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಪ್ರತಿನಿಧಿ ಅಶೋಕ್ ಕುಮಾರ್ ಸಿಂಗ್ ಅವರು ಶನಿವಾರ ಜಿಲ್ಲೆಯ ಸ್ಥಳೀಯಾಡಳಿತೆ ಸಂಸ್ಥೆಗಳ ಅಧ್ಯಕ್ಷರು ಮತ್ತು ಪ್ರತಿನಿಧಿಗಳ ಜೊತೆಗೆ ಸಂವಾದ ನಡೆಸಿದರು. 
       ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬ್ಲಾಕ್, ಗ್ರಾಮ ಪಂಚಾಯತಿ, ನಗರಸಭೆಗಳ ಅಧ್ಯಕ್ಷರು, ಪ್ರತಿನಿಧಿಗಳು ಭಾಗವಹಿಸಿದರು.
    ದೇಶದಲ್ಲಿ ತೀವ್ರತರ ಕುಡಿಯುವ ನೀರಿನ ಬರ ಅನುಭವಿಸುತ್ತಿರುವ 255 ಜಿಲ್ಲೆಗಳಲ್ಲಿ ಕಾಸರಗೋಡೂ ಸೇರಿದ್ದು, ಸೂಕ್ತ ಜಲಸಂರಕ್ಷಣೆ ಚಟುವಟಿಕೆಗಳ ಮೂಲಕ ಈ ಪಿಡುಗಿನಿಂದ ಪಾರಾಗಬೇಕಾದ ಅನಿವಾರ್ಯತೆಯಿದೆ. ಚಟುವಟಿಕೆಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ವೇಳೆ ಸಾಧ್ಯತೆಗಳನ್ನು ಮೂಲಭೂತವಾಗಿ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಅಶೋಕ್ ಕುಮಾರ್ ಸಿಂಗ್ ಈ ವೇಳೆ ಅಭಿಪ್ರಾಯಪಟ್ಟರು.
      ಜಲ ಬಳಕೆ ವಿಧಾನದಲ್ಲಿ ದಕ್ಷತೆಯ ಸಹಭಾಗಿತ್ವ ವಹಿಸಿ ಜಲನೀತಿ ರಚಿಸುವುದು ಅನಿವಾರ್ಯ ಎಂದು ಸ್ಥಳೀಯಾಡಳೀತ ಸಂಸ್ಥೆಗಳ ಪ್ರತಿನಿಧಿಗಳು ಅಶೋಕ್ ಕುಮಾರ್ ಅವರಲ್ಲಿ ಆಗ್ರಹಿಸಿದರು. ಜಿಲ್ಲೆಯ ನದಿಗಳನ್ನು ವೈಜ್ಞಾನಿಕ ರೀತಿಯ ಪಾಶ್ರ್ವಭಿತ್ತಿ ನಿರ್ಮಿಸುವ ಮೂಲಕ ಸಂರಕ್ಷಿಸುವ, ಜಿಲ್ಲೆಯ ಕೆಲವು ವಲಯಗಳ ಭೌಗೋಳಿಕ ಹಿನ್ನೆಲೆಯಲ್ಲಿ ನದಿನೀರು ಹರಿದು ಹಾಳಾಗುತ್ತಿದ್ದು, ಇದನ್ನು ತಡೆಯಲು ಪೂರಕ ಸೌಲಭ್ಯ ಏರ್ಪಡಿಸುವಂತೆ ಜನಪ್ರತಿನಿಧಿಗಳು ಬೇಡಿಕೆ ಮುಂದಿರಿಸಿದರು.
        ಮಂಜೇಶ್ವರ ಬ್ಲಾಕ್ ನಲ್ಲಿ ಸಿಬ್ಬಂದಿಯ ಕೊರತೆಯ ಪರಿಣಾಮ ಅನೇಕ ಚಟುವಟಿಕೆಗಳು ಪೂರ್ತಿಗೊಂಡಿಲ್ಲ. ಇಲ್ಲಿನ ಕುಡಿಯುವ ನೀರಿನ ಬರ ಪರಿಹರಿಸಲು ಮತ್ತು ಸಮುದ್ರದ ನೀರು ಶುದ್ಧಗೊಳಿಸಿ ಮನೆ ಬಳಕೆಗೆ ಮತ್ತು ಕೃಷಿಗೆ ಬಳಸುವ ವ್ಯವಸ್ಥೆ ನಡೆಸುವಂತೆ, ಇದಕ್ಕೆ ಕೇಂದ್ರ ಸರಕಾರ ನೇತೃತ್ವ ವಹಿಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
    ಭತ್ತದ ಕೃಷಿ ನೀರಿಂಗಿಸುವ ಪ್ರಕ್ರಿಯೆಗೆ ಪೂರಕವಾಗಿದ್ದು, ಈ ಕೃಷಿಗೆ ಹೆಚ್ಚುವರಿಪ್ರೋತ್ಸಾಹ ಒದಗಿಸಬೇಕು. ಭೂಮಿಯನ್ನು ಬರಡು ಮಾಡುವ ಅಕೇಷ್ಯಾ ಮರಗಳನ್ನು ತೆರವುಗೊಳಿಸುವಂತೆ ಜನಪ್ರತಿನಿಧಿಗಳು ಆಗ್ರಹಿಸಿದರು. ವನಾಂತರ ಪ್ರದೇಶಗಳ ಕೆರೆಗಳು, ತೊರೆಗಳು ಸಹಿತ ಜಲಾಶಯಗಳನ್ನು ಸಂರಕ್ಷಿಸುವಲ್ಲಿ ಕೆಲವು ಕಾನೂನು ತೊಡಕುಗಳಿದ್ದು, ಅವುಗಳನ್ನು ಪರಿಹರಿಸಬೇಕು ಎಂಬ ಬೇಡಿಕೆ ಇರಿಸಲಾಯಿತು.
     ಜಲದ ದುರುಪಯೋಗ ವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪಿಂಕ್ಲರ್ ಬಳಕೆ ಕೈಬಿಟ್ಟು ಡ್ರಿಪ್ ಇರಿಗೇಶನ್ ಯೋಜನೆಗೆ ಪ್ರೋತ್ಸಾಹ ನೀಡಬೇಕು. ಚರಂಡಿ ನಿರ್ಮಾಣ ವೇಳೆ ಪೂರ್ಣ ರೀತಿಯಲ್ಲಿ ಕಂಕ್ರೀಟೀಕರಣ ನಡೆಸುವ ಕಾರಣ ಭೂಮಿಗೆ ಮಳೆ ನೀರು ಇಂಗಿಹೋಗುವುದಕ್ಕೆ ತಡೆಯಾಗುತ್ತಿದೆ. ಚರಂಡಿಯ ಅಡಿಭಾಗದಲ್ಲಿ ಕಾಂಕ್ರೀಓಟು ನಡೆಸದೇ ನೀರು ಭೂಮಿಗಿಳಿಯುವಂತೆ ಮಾಡಬೇಕು ಎಂಬ ಸಲಹೆ ಸಭೆಯ ಮುಂದೆ ಇರಿಸಲಾಯಿತು.
      ಜನಶಕ್ತಿ ಅಭಿಯಾನದ ಜಿಲ್ಲಾ ನೋಡೆಲ್ ಅಧಿಕಾರಿ,ಜಿಲ್ಲಾ ಮಣ್ಣು ಸಂರಕ್ಷಣೆ ಅಧಿಕಾರಿ ವಿ.ಎಂ.ಅಶೋಕ್ ಕುಮಾರ್, ಪ್ರಭಾರ ಹೆಚ್ಚುವರಿ ದಂಡನಾಧಿಕಾರಿ ಪಿ.ಆರ್.ರಾಧಿಕಾ, ಹುಸೂರ್ ಶಿರಸ್ತೇದಾರ್ ಕೆ.ನಾರಾಯಣನ್, ಸಹಾಯಕ ಅಭಿವೃದ್ಧಿ ಕಮೀಷನರ್ (ಜನರಲ್) ಬೆವಿನ್ ಜೋನ್ ವರ್ಗೀಸ್,ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶೇಷ ಅಧಿಕಾರಿ ಇ.ಪಿ.ರಾಜ್ ಮೋಹಮ್ ಮೊದಲಾದವರು ಉಪಸ್ಥಿತರಿದ್ದರು.
     ಸಭೆಯ ಬಳಿಕ ಅಶೋಕ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜಿಲ್ಲೆಯ ಚೆಮ್ನಾಡ್, ಬದಿಯಡ್ಕ, ಪೈವಳಿಕೆ ಗ್ರಾಮಪಂಚಾಯತಿಗಳಿಗೆ ಭೇಟಿ ನೀಡಿದೆ. ಈ ಪ್ರದೇಶಗಳ ಜಲ ಲಭ್ಯತೆ, ಸಮಸ್ಯೆಗಳು, ಜಲಸಂರಕ್ಷಣೆಯ ಚಟುವಟಿಕೆಗಳು ಇತ್ಯಾದಿಗಳ ಅವಲೋಕನ ನಡೆಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries