HEALTH TIPS

25 ರಂದು ಪೈವಳಿಕೆಯಲ್ಲಿ ಪಟೇಲ್ ಕೆ. ರಾಮಯ್ಯ ಬಲ್ಲಾಳ್ - ಲಕ್ಷ್ಮೀ ಅಮ್ಮ ಸ್ಮರಣಾರ್ಥ ನೂತನ ಪುಸ್ತಕ ಭಂಡಾರ ಮತ್ತು ವಾಚನಾಲಯ ಉದ್ಘಾಟನೆ.


      ಉಪ್ಪಳ : ಪಟೇಲ್ ಕೆ. ರಾಮಯ್ಯ ಬಲ್ಲಾಳ್ ಮತ್ತು ಲಕ್ಷ್ಮೀ ಅಮ್ಮ ಇವರ ಸ್ಮರಣಾರ್ಥ ಅವರ ಪುತ್ರ ರಾಜ್ಯಪ್ರಶಸ್ತಿ ಪುರಸ್ಕøತ ವಿಶ್ರಾಂತ ಅಧ್ಯಾಪಕ, ಸಿ. ರಾಘವ ಬಲ್ಲಾಳ್ ಅವರು ಪೈವಳಿಕೆಯಲ್ಲಿ ನಿರ್ಮಿಸಿದ ನೂತನ ಪುಸ್ತಕ ಭಂಡಾರ ಮತ್ತು ವಾಚನಾಲಯದ ಉದ್ಘಾಟನಾ ಸಮಾರಂಭವು ಆ. 25 ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಪೈವಳಿಕೆ ನಗರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ವಠಾರದಲ್ಲಿ ನಡೆಯಲಿದೆ.
ಪುಸ್ತಕ ಭಂಡಾರದ ಉದ್ಘಾಟನೆಯನ್ನು ಪೈವಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾರತಿ ಜೆ ಶೆಟ್ಟಿ ನಿರ್ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್ ವಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದ ವಿಶ್ರಾಂತ ಅಧ್ಯಾಪಕ ಡಾ. ಎಂ. ರಾಮ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪೈವಳಿಕೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸುನೀತ ವಲ್ಟಿ ಡಿಸೋಜ, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯ ಪ್ರಸಾದ್ ರೈ ಕಯ್ಯಾರು, ಪೈವಳಿಕೆ ಗ್ರಾಮ ಪಂಚಾಯತಿ ಸದಸ್ಯೆ ರಾಬಿಯ, ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್  ಅಧ್ಯಕ್ಷ ಎಸ್ ನಾರಾಯಣ ಭಟ್, ಕಾರ್ಯದರ್ಶಿ ಅಹಮ್ಮದ್ ಹುಸೇನ್ ಪಿ.ಕೆ., ವಿಶ್ರಾಂತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ, ಪೈವಳಿಕೆ ನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಇಬ್ರಾಹಿಂ ಬಿ. ಅತಿಥಿಗಳಾಗಿ ಭಾಗವಹಿಸುವರು. ಸಿ ರಾಘವ ಬಲ್ಲಾಳ್, ಉಷಾದೇವಿ ಸಿ ಆರ್, ವಿಶ್ರಾಂತ ಮುಖ್ಯೋಪಾಧ್ಯಾಯಿನಿ ಶ್ರೀಕುಮಾರಿ ಟೀಚರ್, ಎ. ವಿ. ರಾಧಾಕೃಷ್ಣ ಬಲ್ಲಾಳ್, ಶ್ರಾವ್ಯಶ್ರೀ ಬಲ್ಲಾಳ್, ಡಾ. ರತ್ನಾಕರ ಮಲ್ಲಮೂಲೆ, ಪಿ. ರಾಮಚಂದ್ರ ಭಟ್ ಥರ್ಮತ್ತಡ್ಕ ಮೊದಲಾದವರು ಉಪಸ್ಥಿತರಿರುವರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಿ. ರಾಘವ ಬಲ್ಲಾಳ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries