HEALTH TIPS

ಆ.29ರಂದು ಬದಿಯಡ್ಕ ಶ್ರೀ ಗುರುಸದನದಲ್ಲಿ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ಸಭೆ

     
       ಬದಿಯಡ್ಕ: ಅಡಿಕೆ ಬೆಳೆಗಾರ ಸದಸ್ಯರ ಜೊತೆ ವಿಚಾರ ವಿನಿಮಯಕ್ಕಾಗಿ ನಡೆಸುತ್ತಿರುವ ಬೆಳೆಗಾರರ ಸಭೆಯು ಹಲವು ವರ್ಷಗಳಿಂದ ಕ್ಯಾಂಪ್ಕೋ ನಡೆಸುತ್ತಿದ್ದು, ಆ.29 ಗುರುವಾರ ಬೆಳಿಗ್ಗೆ 10 ಕ್ಕೆ ಬದಿಯಡ್ಕ ಶ್ರೀ ಗುರುಸದನದಲ್ಲಿ ನಡೆಯಲಿರುವುದು. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಸಭೆಯ ಅಧ್ಯಕ್ಷತೆ ವಹಿಸುವರು. ವ್ಯವಸ್ಥಾಪಕ ನಿರ್ದೇಶಕರು, ಸಂಸ್ಥೆಯ ಉಪಾಧ್ಯಕ್ಷರು, ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದು ಸದಸ್ಯ ಬೆಳಗೆಗಾರರ ಪಶ್ನೆಗಳಿಗೆ ಉತ್ತರಿಸಲಿದ್ದಾರೆ. ಎಲ್ಲಾ ಸದಸ್ಯರೂ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಬಂಧಪಟ್ಟವರು ವಿನಂತಿಸಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries