HEALTH TIPS

ಸಂವಿಧಾನದ 370ನೇ ವಿಧಿ ರದ್ದತಿ ಮೂಲಕ ಸರ್ದಾರ್ ವಲ್ಲಭಬಾಯ್ ಪಟೇಲ್ ಕನಸು ನನಸು- ಪ್ರಧಾನಿ

 
        ನವದೆಹಲಿ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
      ಕೆಂಪುಕೋಟೆಯಲ್ಲಿ 73ನೇ ಸ್ವಾತಂತ್ಸೋವದ ಅಂಗವಾಗಿ ನಿನ್ನೆ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
     ಹೊಸ ಸರ್ಕಾರ  ಅಧಿಕಾರಕ್ಕೆ ಬಂದು ಇನ್ನೂ 10 ವಾರಗಳು ಪೂರ್ಣಗೊಂಡಿಲ್ಲ. ಆದರೆ, ಈ ಕಿರು ಅವಧಿಯಲ್ಲಿಯೇ ಅನೇಕ ಪ್ರಮುಖವಾದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಸಂವಿಧಾನದ 370 ನೇ ವಿಧಿ, ತ್ರಿವಳಿ ತಲಾಖ್ ಪದ್ದತಿಗೆ ಅಂತ್ಯ ಹಾಡಲಾಗಿದೆ ಎಂದು ತಿಳಿಸಿದರು.
     370ನೇ ವಿಧಿಯಿಂದಾಗಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆ ಹೆಚ್ಚಾಗಿತ್ತು. ಮಹಿಳೆಯರು, ಮಕ್ಕಳು, ದೀನ ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ನೈರ್ಮಲ್ಯೀಕರಣ ವ್ಯವಸ್ಥೆ ಎಂಬುದೇ ಇರಲಿಲ್ಲ ಇದನ್ನು ಹೇಗೆ ಒಪ್ಪಿಕೊಳ್ಳಲಿ ಎಂದು ಪ್ರಶ್ನಿಸಿದ ಮೋದಿ, 370ನೇ ವಿಧಿಯನ್ನು ಸಮರ್ಥಿಸಿಕೊಳ್ಳುವವರು ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ. ಅಂತಿಮವಾಗಿ ಬಹುಮತದೊಂದಿಗೆ ಈ ವಿಧಿಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
     ದೇಶದಲ್ಲಿನ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಪ್ರವಾಹ  ಕುರಿತು ಕಳವಳ ವ್ಯಕ್ತಪಡಿಸಿ, ರಕ್ಷಾ ಬಂಧನ್ ಹಬ್ಬದ ಶುಭಾಶಯ ಕೋರುತ್ತಾ ಭಾಷಣ ಆರಂಭಿಸಿದ ಮೋದಿ, ಪ್ರವಾಹ ಪೀಡಿತ ಜನರ ಸಂಕಷ್ಟದಲ್ಲಿ  ಎಲ್ಲರೂ ಒಗ್ಗೂಡಬೇಕಾಗಿದೆ ಎಂದರು.
    ಜನಸಂಖ್ಯಾ ಹೆಚ್ಚಳದಿಂದ ಮುಂದಿನ ಪೀಳಿಗೆಗೆ ತೊಂದರೆಯಾಗಲಿದೆ. ಸಣ್ಣ ಕುಟುಂಬದ ನೀತಿ ಅನುಕರಣೆಯಿಂದ ದೇಶದ ಅಭಿವೃದ್ಧಿ ಹಾಗೂ ದೇಶಭಕ್ತಿ ಹೆಚ್ಚಾಗಲಿದೆ. ಭ್ರಷ್ಟಾಚಾರ, ಕಪ್ಪು ಹಣ ತೊಡೆದುಹಾಕುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಮೋದಿ ಕರೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries