HEALTH TIPS

ಕೊಂಡೆವೂರು ವಿದ್ಯಾಪೀಠದಲ್ಲಿ ಸಂಭ್ರಮದ ಶ್ರೀಕೃಷ್ಣಜನ್ಮಾಷ್ಟಮಿ


      ಉಪ್ಪಳ: ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಅರುಣ, ಉದಯ ತರಗತಿಯ ಮಕ್ಕಳಿಗೆ ಮುದ್ದುಕೃಷ್ಣ ವೇಷಸ್ಪರ್ಧೆಯನ್ನು ಹಾಗೂ ಒಂದನೇ ತರಗತಿ, ಎರಡನೇ ತರಗತಿಯ ಮಕ್ಕಳಿಗೆ ಬಾಲಕೃಷ್ಣ ವೇಷಸ್ಪರ್ಧೆಯನ್ನು ನಡೆಸಲಾಯಿತು. ಸಮಾರೋಪಸಮಾರಂಭದಲ್ಲಿ ನಿವೃತ್ತ ಶಿಕ್ಷಕಿ  ಶ್ಯಾಮಲಾ, ಶಿಶುವಾಟಿಕಾ ಸಮಿತಿಯ ಅಧ್ಯಕ್ಷ ಅನಂತಕೃಷ್ಣ, ಶಿಶುವಾಟಿಕಾ ಮಾತೃಸಮಿತಿಯ ಅಧ್ಯಕ್ಷೆ ಲೀಲಾ ಹಾಗೂ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ  ರಾಮಚಂದ್ರ ಚೆರುಗೋಳಿ ಉಪಸ್ಥಿತರಿದ್ದು ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries