HEALTH TIPS

ಕುಂಡಂಗುಳಿಯಲ್ಲಿ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ಸಭೆ

             
       ಮುಳ್ಳೇರಿಯ: ಕೃಷಿಕರಿಂದ ಕೃಷಿಕರಿಗಾಗಿಯೇ ಹುಟ್ಟಿಕೊಂಡ ಸಂಸ್ಥೆ ಕ್ಯಾಂಪ್ಕೋ. ಬೆಲೆಯ ಸ್ಥಿರತೆ ಹಾಗೂ ಬೆಳೆಗಾರರ ಹಿತರಕ್ಷಣೆ ಎಂಬ ಧ್ಯೇಯವನ್ನು ಮುಂದಿಟ್ಟುಕೊಂಡು ಮಾರುಕಟ್ಟೆಯ ಏಕೀಕರಣಕ್ಕೆ ಸತತ ಪ್ರಯತ್ನವನ್ನು ಮಾಡಲಾಗುತ್ತಿದೆ. ಸಹಕಾರಿ ಕ್ಷೇತ್ರಗಳ ಮೂಲಕ ಸಮಾಜವು ಅಭಿವೃದ್ಧಿಪಥದತ್ತ ಸಾಗುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು.
ಕುಂಡಂಗುಳಿ ಪಂಚಲಿಂಗೇಶ್ವರ ದೇವಸ್ಥಾನದ ವೈಕುಂಠ ಆಡಿಟೋರಿಯಂನಲ್ಲಿ ಶುಕ್ರವಾರ ನಡೆದ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
      2018-19ನೇ ಸಾಲಿನಲ್ಲಿ ಕ್ಯಾಂಪ್ಕೋ 1875 ಕೋಟಿಯ ದಾಖಲೆಯ ವ್ಯವಹಾರವನ್ನು ಮಾಡಿದೆ ಎಂದು ತಿಳಿಸಿದ ಅವರು ಸದಸ್ಯ ಬೆಳೆಗಾರರ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಿದರು. ಆಧುನಿಕ ತಂತ್ರಜ್ಞಾನಗಳು ಬೆಳವಣಿಗೆಯನ್ನು ಕಾಣುತ್ತಿದ್ದು, ಅದಕ್ಕೆ ನಾವು ಹೊಂದಿಕೊಳ್ಳಬೇಕು. ಅಡಿಕೆ ಕೃಷಿಯೊಂದಿಗೆ ಸಮಗ್ರ ಕೃಷಿಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಕೃಷಿಕರಾದ ಕುಞಂಬು ನಾಯರ್ ಮಡಕ್ಕಾಲ್, ಕುಞÂ್ಞಕಣ್ಣನ್ ನಾಯರ್ ಪೆರಳಂ, ಮೋಹನನ್ ತೋಣಿಕ್ಕಡವ್, ಪಿ.ವಿ.ಲಕ್ಷ್ಮೀ, ನಾರಾಯಣನ್ ನಾಯರ್ ಕುಣಿಯೇರಿ ದೀಪಜ್ವಲನೆಗೈದು ಸಭೆಗೆ ಚಾಲನೆಯನ್ನು ನೀಡಿದರು.
    ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ನಿರ್ದೇಶಕರಾದ ಕೆ.ಸತೀಶ್ಚಂದ್ರ ಭಂಡಾರಿ, ಕೆ.ರಾಜಗೋಪಾಲ್, ಎಂ.ಕೆ.ಶಂಕರನಾರಾಯಣ ಭಟ್, ಬಿ.ಶಿವಕೃಷ್ಣ ಭಟ್, ಜಯರಾಮ ಸರಳಾಯ, ಪದ್ಮರಾಜ ಪಟ್ಟಾಜೆ, ಸಹಕಾರ ಭಾರತಿಯ ಕರುಣಾಕರನ್ ನಂಬ್ಯಾರ್, ಹಿರಿಯ ಪ್ರಬಂಧಕ ಮುರಳಿ, ಹಿರಿಯ ಪ್ರಬಂಧಕ ಪ್ರಕಾಶ್ ಶೆಟ್ಟಿ ಪಾಲ್ಗೊಂಡಿದ್ದರು.
           

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries