HEALTH TIPS

ಪತ್ರಕರ್ತರಿಗೆ ನಿಬರ್ಂಧ ಪ್ರಶ್ನಿಸಿ ಅರ್ಜಿ; ಕೇಂದ್ರ, ಜಮ್ಮು-ಕಾಶ್ಮೀರ ಆಡಳಿತಕ್ಕೆ 'ಸುಪ್ರೀಂ' ನೊಟೀಸ್

     
         ನವದೆಹಲಿ: ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಂತರ ಪತ್ರಕರ್ತರ ಮೇಲೆ ಹೇರಲಾಗಿರುವ ನಿಬರ್ಂಧವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತದ ಪ್ರತಿಕ್ರಿಯೆ ಕೋರಿದೆ.
      ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ, ಕಾಶ್ಮೀರ ಟೈಮ್ಸ್ ಕಾರ್ಯಕಾರಿ ಸಂಪಾದಕಿ ಅನುರಾಧ ಭಾಶಿನ್ ಸಲ್ಲಿಸಿದ್ದ ಮನವಿಗೆ ಸಂಬಂಧಪಟ್ಟಂತೆ ನೊಟೀಸ್ ಜಾರಿ ಮಾಡಿ ಇನ್ನು ಒಂದು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.
    ಜಮ್ಮು-ಕಾಶ್ಮೀರದಲ್ಲಿ ಮಾಧ್ಯಮಗಳಿಗೆ ಉತ್ತಮ ವಾತಾವರಣ ಕಲ್ಪಿಸಿ ತಮ್ಮ ವೃತ್ತಿಪರತೆಯನ್ನು ಹೆಚ್ಚಿಸಿಕೊಳ್ಳಲು ಮೊಬೈಲ್, ಇಂಟರ್ನೆಟ್ ಸೇವೆಗಳು ಸೇರಿದಂತೆ ಎಲ್ಲಾ ರೀತಿಯ ಸಂವಹನ ವಿಧಾನಗಳನ್ನು ಮರುಸ್ಥಾಪಿಸಲು ಆದೇಶ ನೀಡುವಂತೆ ಅನುರಾಧ ಬಾಶಿನ್ ಅರ್ಜಿಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries