HEALTH TIPS

ಸೆ.14 ರಂದು ಜಿಲ್ಲಾ ಬಂಟರ ಸಂಘದ ಪ್ರತಿಭಾ ಪುರಸ್ಕಾರ, ಸಮ್ಮಾನ, ವಿದ್ಯಾರ್ಥಿ ವೇತನ ವಿತರಣೆ

     ಕುಂಬಳೆ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗು ಬೆಂಗಳೂರು ಬಂಟರ ಸಂಘಗಳ ಸಹಯೋಗದಲ್ಲಿ ಕಾಸರಗೋಡು ಜಿಲ್ಲಾ ಬಂಟರ ಸಂಘವು ಆಯೋಜಿಸುವ 2019-20 ನೇ ಸಾಲಿನ  ವಿದ್ಯಾಭ್ಯಾಸ ಸಹಾಯ ವಿತರಣೆ, ಪ್ರತಿಭಾ ಪುರಸ್ಕಾರ, ನಾಡೋಜ ಡಾ.ಕಯ್ಯಾರ ಸ್ಮಾರಕ ಪ್ರತಿಭಾ ಪುರಸ್ಕಾರ ಸಮಾರಂಭ ಸೆ.14 ರಂದು ಬೆಳಿಗ್ಗೆ 10 ಗಂಟೆಗೆ ಕುಂಬಳೆ ಸಿಟಿ ಹಾಲ್‍ನ ಮುಖ್ಯ ಸಭಾಂಗಣದಲ್ಲಿ ಜರಗಲಿದೆ.
    ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸಮಾರಂಭವನ್ನು ಉದ್ಘಾಟಿಸಲಿದ್ದು, ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಸದಾನಂದ ರೈ ಅಧ್ಯಕ್ಷತೆ ವಹಿಸುವರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಹಿರಿಯ ಉದ್ಯಮಿ, ಸಾಂಸ್ಕøತಿಕ, ಧಾರ್ಮಿಕ ಮುಖಂಡ, ಕೊಡುಗೈ ದಾನಿ ಅರಿಯಡ್ಕ ಚಿಕ್ಕಪ್ಪ ನಾೈಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
     ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ, ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರತಿನಿಧಿ ಸತೀಶ ಅಡಪ ಸಂಕಬೈಲು, ನಿವೃತ್ತ ಉಪಜಿಲ್ಲಾಧಿಕಾರಿ ಹಾಗು ಕಾಸರಗೋಡು ಜಿಲ್ಲಾ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಿ.ಕೆ.ಶೆಟ್ಟಿ ಬೊಳ್ನಾಡುಗುತ್ತು, ಮಂಜೇಶ್ವರ ಫಿರ್ಕಾ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಕೆ.ದಾಸಣ್ಣ ಆಳ್ವ ಕುಳೂರುಬೀಡು, ಕುಂಬಳೆ ಫಿರ್ಕಾ ಬಂಟ್ಸ್ ಸರ್ವೀಸ್ ಸೊಸೈಟಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಳಮಲೆ, ಕಾಸರಗೋಡು ವಲಯ ಬಂಟರ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಕುಚ್ಚಿಕ್ಕಾಡು ಶುಭಹಾರೈಸುವರು.
    ಸಮಾರಂಭದಲ್ಲಿ ಪತ್ರಕರ್ತ, ದಕ್ಷಿಣ ಏಶ್ಯಾ ಲಾಡ್ಲಿ ಮೀಡಿಯಾ ಪ್ರಶಸ್ತಿ ಪುರಸ್ಕøತ ರಾಜೇಶ್ ರೈ ಚಟ್ಲ ಅವರನ್ನು ಸಮ್ಮಾನಿಸಿ ಅಭಿನಂದಿಸಲಾಗುವುದು. ಮಾತೃ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ರಘು ಶೆಟ್ಟಿ ಕುಂಜತ್ತೂರು, ಮುಕ್ತಾನಂದ ರೈ, ನ್ಯಾಯವಾದಿ ಬಿ.ಸುಬ್ಬಯ್ಯ ರೈ, ಮಧುಕರ ರೈ ಕೊರೆಕ್ಕಾನ, ಕಾರ್ತಿಕ್ ಶೆಟ್ಟಿ, ಲತಾ ಬಿ.ರೈ ಉಪಸ್ಥಿತರಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries