HEALTH TIPS

ಇಂದಿನಿಂದ ' ಏಕ ರಾಷ್ಟ್ರ ಏಕ ಸಂವಿಧಾನ 'ಅಭಿಯಾನಕ್ಕೆ ಬಿಜೆಪಿ ಚಾಲನೆ

           
       ನವದೆಹಲಿ:  ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿದ ಹಿನ್ನೆಲೆಯಲ್ಲಿ ಇಂದಿನಿಂದ(ಸೆಪ್ಟೆಂಬರ್ 1) ಏಕ ರಾಷ್ಟ್ರ ಏಕ ಸಂವಿಧಾನ ರಾಷ್ಟ್ರೀಯ ಏಕತಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ತಿಳಿಸಿದ್ದಾರೆ.
       ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ಸಂವಿಧಾನದ 370ನೇ ವಿಧಿ ರದ್ದತಿ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ, ಪ್ರತಿಪಕ್ಷಗಳ ವಿರೋಧ, ವಾದ, ನಿಲುವುಗಳ  ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ಸುದ್ದಿಗಾರರಿಗೆ ಹೇಳಿದ್ದಾರೆ.
       ಪಕ್ಷದ ಹಿರಿಯ ನಾಯಕರು ದೇಶಾದ್ಯಂತ ಸುಮಾರು 2 ಸಾವಿರ ಜನರನ್ನು ಭೇಟಿಯಾಗಲಿದ್ದು, ಸಂವಿಧಾನದ 370ನೇ  ವಿಧಿ ರದ್ದತಿ ಬಗ್ಗೆ ವಿವರಣೆ ನೀಡಲಾಗುವುದು ಎಂದರು. ಈ ಅಭಿಪ್ರಾಯ ಸಂಗ್ರಹಕರು ತಮ್ಮ ಕ್ಷೇತ್ರದಲ್ಲಿನ ಜನರಿಗೆ ಸಂವಿಧಾನದ 370ನೇ ವಿಧಿ ರದ್ದತಿ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ತಿಳಿಸಿದರು.
    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್, ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಕೇಂದ್ರ  ಸಚಿವರು ಹಾಗೂ ರಾಜ್ಯಗಳ ಮುಖ್ಯಮಂತ್ರಿಗಳು ವಿವಿಧ ಪ್ರದೇಶಗಳಿಗೆ ತೆರಳಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುರಳೀಧರ್ ರಾವ್ ಹೇಳಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries