HEALTH TIPS

ಗಡಿನಾಡಲ್ಲಿ ಕನ್ನಡವನ್ನು ಪ್ರಾದೇಶಿಕ ಭಾಷೆಯಾಗಿ ಅಂಗೀಕರಿಸುವಂತೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ

 
       ಕಾಸರಗೋಡು : ಜಿಲ್ಲೆಯ ಅಂಚೆ ಕಛೇರಿ ಉದ್ಯೋಗ ನೇಮಕಾತಿಯಲ್ಲಿ ಕಾಸರಗೋಡು ಕನ್ನಡ  ಭಾಷಾ ಅಲ್ಪಸಂಖ್ಯಾತರಿಗೆ ಕನ್ನಡ ಭಾಷೆಯಲ್ಲೇ ಪರೀಕ್ಷೆ ಬರೆಯಲು ಹಾಗೂ ಕನ್ನಡವನ್ನು ಪ್ರಾದೇಶಿಕ ಭಾಷೆಯಾಗಿ ಅಂಗೀಕರಿಸಬೇಕೆಂದು ಕೇಂದ್ರ ಸರಕಾರವನ್ನು  ಆಗ್ರಹಿಸಿ ಕೇಂದ್ರ ಸಚಿವ  ವಿ. ಮುರಳೀಧರನ್ ಅವರಿಗೆ ಬಿಜೆಪಿ ನೇತಾರರು ನಿನ್ನೆ ತಲಶ್ಚೇರಿಯಲ್ಲಿ ಭೇಟಿಯಾಗಿ ಮನವಿಯನ್ನು ನೀಡಿದರು.
       ಕೇರಳದ ರಾಜ್ಯ ಭಾಷೆ ಮಲಯಾಳವಾದರೂ ಕಾಸರಗೋಡು ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶವಾಗಿದೆ.ಆದ್ದರಿಂದ ರಾಜ್ಯ ಸರ್ಕಾರ ಕನ್ನಡಕ್ಕೆ ಮನ್ನಣೆ ನೀಡಬೇಕಾಗಿದೆ. ಆದರೆ ಕನ್ನಡಿಗರ ಹಕ್ಕುಗಳನ್ನು ನೀಡದಿರುವುದರಿಂದ ಜಿಲ್ಲೆಯ ಕನ್ನಡಿಗರು ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಆದುದರಿಂದ ಕನ್ನಡಿಗರಿಗಾಗುವ ಅನ್ಯಾಯವನ್ನು ಹೋಗಲಾಡಿಸಲು ಕೇಂದ್ರ ಸರಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಬಿಜೆಪಿ ಸಚಿವರಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದೆ.
   ಬಿಜೆಪಿ ಜಿಲ್ಲಾಧ್ಯಕ್ಷ  ನ್ಯಾಯವಾದಿ. ಕೆ. ಶ್ರೀಕಾಂತ್, ರಾಜ್ಯ ಸಮಿತಿ ಸದಸ್ಯ  ಪಿ.ಸುರೇಶ್ ಕುಮಾರ್ ಶೆಟ್ಟಿ, ಕಾಸರಗೋಡು ಮಂಡಲಾಧ್ಯಕ್ಷ ಎಂ. ಸುಧಾಮ, ಮಂಡಲ ಪ್ರಧಾನ ಕಾರ್ಯದಶಿ9 ಸುಕುಮಾರನ್ ಕುದುರೆಪ್ಪಾಡಿ , ಉದುಮ ಮಂಡಲ ಪ್ರಧಾನ ಕಾರ್ಯದರ್ಶಿ ಎನ್. ಬಾಬುರಾಜ್ ಮೊದಲಾದವರು ನಿಯೋಗದಲ್ಲಿದ್ದರು. ಮನವಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries