ಮುಳ್ಳೇರಿಯ : ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಅಂಗಸಂಸ್ಥೆಯಾದ ಮುಳ್ಳೇರಿಯ ಶಿವಳ್ಳಿ ಬ್ರಾಹ್ಮಣ ಸಭಾದ ಮಾಸಿಕ ಸಭೆಯು ಅಡೂರಿನ ಕೃಷ್ಣನಿವಾಸದ ಬಾಲಕೃಷ್ಣ ತಂತ್ರಿಗಳ ಮನೆಯಲ್ಲಿ ಮಂಗಳವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ನೂಜಿಬೆಟ್ಟು ವೆಂಕಟಕೃಷ್ಣ ಕಾರಂತ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವಳ್ಳಿ ಬ್ರಾಹ್ಮಣ ಸಭಾದ ಜಿಲ್ಲಾ ಅಧ್ಯಕ್ಷೆ ಸತ್ಯಪ್ರೇಮಾ ಭಾರಿತ್ತಾಯ, ಸದಸ್ಯರಾದ ಶ್ರೀಪತಿ ಎಂ, ರಾಜಾರಾಮ ಸರಳಾಯ, ಅನಂತರಾಮ ಎಂ, ವಿಜಯರಾಜ ಪಿ, ಅನಿಲ್ ಕುಮಾರ್ ಎ, ಎ. ಬಾಲಕೃಷ್ಣ ತಂತ್ರಿ, ಸುಮತಿ ಬಿ ಭಾಗವಹಿಸಿದ್ದರು. ಸಭೆಯಲ್ಲಿ 'ಪರಸ್ಪರ ಸಹಾಯನಿಧಿ' ಯೋಜನೆಗೆ ಚಾಲನೆ ನೀಡಲಾಯಿತು.
ಇದೇ ಡಿಸೆಂಬರ್ 21ರಿಂದ 2 ದಿನ ಮುಜುಂಗಾವು ಭಾರತೀಯ ವಿದ್ಯಾಪೀಠದಲ್ಲಿ ನಡೆಯುವ ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಜಿಲ್ಲಾ ಸಾಂಸ್ಕøತಿಕ ಹಾಗೂ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಕೇರಳ ರಾಜ್ಯ ಉಡುಪಿ ಮಾಧ್ವ ಬ್ರಾಹ್ಮಣ ಸಭಾ ನೀಡುವ ವಿವಿಧ ವಿದ್ಯಾರ್ಥಿವೇತನಗಳ ಬಗ್ಗೆ ಸಭೆಯಲ್ಲಿದ್ದ ಸದಸ್ಯರಿಗೆ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಸೂಚಿಸಲಾಯಿತು.
ಮುಳ್ಳೇರಿಯ ವಲಯ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರು ನಡೆಸುತ್ತಿರುವ ವಿಷ್ಣು ಸಹಸ್ರನಾಮ ಪಾರಾಯಣ ಯೋಜನೆಯನ್ನು ಬೆಂಬಲಿಸಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಡೂರಿನ ಶ್ರೀಪ್ರಿಯಾ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮದಲ್ಲಿ ಸತ್ಯಪ್ರೇಮಾ ಭಾರಿತ್ತಾಯ, ಜಯಲಕ್ಷ್ಮಿ ಪಿ ತಂತ್ರಿ, ಚಂಚಲಾ ಸರಳಾಯ, ನಳಿನಾಕ್ಷಿ ಸರಳಾಯ, ಕಮಲಾಕ್ಷಿ, ಶೋಭಾ ಶ್ರೀಪ್ರಕಾಶ್, ಲತಾ ಆರ್ ಕೆ, ಪದ್ಮಾ ಆರ್, ಅನನ್ಯಾ ಭಾರಿತ್ತಾಯ, ಪ್ರಮಿತಾ ಭಾರಿತ್ತಾಯ, ಪ್ರತಿಮಾ ಭಾರಿತ್ತಾಯ ಭಾಗವಹಿಸಿದ್ದರು. ಹಿಮ್ಮೇಳದಲ್ಲಿ ತಬಲಾವಾದನಲ್ಲಿ ಆದ್ಯಂತ್ ಅಡೂರು ಸಹಕರಿಸಿದ್ದರು. ಪ್ರಶಾಂತ ರಾಜ ವಿ ತಂತ್ರಿ ಸ್ವಾಗತಿಸಿ, ಅನಂತರಾಮ ಎಂ ವಂದಿಸಿದರು. ಸಂಘಟನೆಯ ಮುಂದಿನ ಮಾಸಿಕ ಸಭೆಯು ಅಕ್ಟೋಬರ್ 12ರಂದು ಬೆಳಗ್ಗೆ 10 ಗಂಟೆಗೆ ತಲ್ಪಚ್ಚೇರಿ ಸುಂದರ ಕಲ್ಲೂರಾಯರ ಮನೆಯಲ್ಲಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿದ್ಯಾರ್ಥಿ ವೇತನ : ಕೇರಳ ಉಡುಪಿ ಮಾಧ್ವ ಬ್ರಾಹ್ಮಣ ಸಭಾದ ಆಶ್ರಯದಲ್ಲಿ ರಾಜ್ಯ ಮಟ್ಟದಲ್ಲಿ ನೀಡುವ ವಿವಿಧ ಶೈಕ್ಷಣಿಕ ವಿದ್ಯಾರ್ಥಿ ವೇತನಗಳನ್ನು ಘೋಷಿಸಲಾಗಿದ್ದು, ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಸದಸ್ಯ ವಿದ್ಯಾರ್ಥಿಗಳು ನಿಗದಿತ ಅರ್ಜಿ ಸಮೂನೆಯನ್ನು ಪಡೆದು, ಭರ್ತಿಗೊಳಿಸಿ, ಅಕ್ಟೋಬರ್ 12 ಮೊದಲು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ವಿದ್ಯಾರ್ಥಿ ವೇತನಗಳ ವಿವರಗಳನ್ನು ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ವಾಟ್ಸ್ಪ್ ಗ್ರೂಪ್ನಲ್ಲಿ ಪ್ರಕಟಿಸಲಾಗಿದ್ದು, ಸಮುದಾಯ ಬಾಂಧವರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9447490344ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ನೂಜಿಬೆಟ್ಟು ವೆಂಕಟಕೃಷ್ಣ ಕಾರಂತ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿವಳ್ಳಿ ಬ್ರಾಹ್ಮಣ ಸಭಾದ ಜಿಲ್ಲಾ ಅಧ್ಯಕ್ಷೆ ಸತ್ಯಪ್ರೇಮಾ ಭಾರಿತ್ತಾಯ, ಸದಸ್ಯರಾದ ಶ್ರೀಪತಿ ಎಂ, ರಾಜಾರಾಮ ಸರಳಾಯ, ಅನಂತರಾಮ ಎಂ, ವಿಜಯರಾಜ ಪಿ, ಅನಿಲ್ ಕುಮಾರ್ ಎ, ಎ. ಬಾಲಕೃಷ್ಣ ತಂತ್ರಿ, ಸುಮತಿ ಬಿ ಭಾಗವಹಿಸಿದ್ದರು. ಸಭೆಯಲ್ಲಿ 'ಪರಸ್ಪರ ಸಹಾಯನಿಧಿ' ಯೋಜನೆಗೆ ಚಾಲನೆ ನೀಡಲಾಯಿತು.
ಇದೇ ಡಿಸೆಂಬರ್ 21ರಿಂದ 2 ದಿನ ಮುಜುಂಗಾವು ಭಾರತೀಯ ವಿದ್ಯಾಪೀಠದಲ್ಲಿ ನಡೆಯುವ ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾದ ಜಿಲ್ಲಾ ಸಾಂಸ್ಕøತಿಕ ಹಾಗೂ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಕೇರಳ ರಾಜ್ಯ ಉಡುಪಿ ಮಾಧ್ವ ಬ್ರಾಹ್ಮಣ ಸಭಾ ನೀಡುವ ವಿವಿಧ ವಿದ್ಯಾರ್ಥಿವೇತನಗಳ ಬಗ್ಗೆ ಸಭೆಯಲ್ಲಿದ್ದ ಸದಸ್ಯರಿಗೆ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಸೂಚಿಸಲಾಯಿತು.
ಮುಳ್ಳೇರಿಯ ವಲಯ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿ ಸಮುದಾಯದ ಸದಸ್ಯರು ನಡೆಸುತ್ತಿರುವ ವಿಷ್ಣು ಸಹಸ್ರನಾಮ ಪಾರಾಯಣ ಯೋಜನೆಯನ್ನು ಬೆಂಬಲಿಸಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಡೂರಿನ ಶ್ರೀಪ್ರಿಯಾ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಕಾರ್ಯಕ್ರಮದಲ್ಲಿ ಸತ್ಯಪ್ರೇಮಾ ಭಾರಿತ್ತಾಯ, ಜಯಲಕ್ಷ್ಮಿ ಪಿ ತಂತ್ರಿ, ಚಂಚಲಾ ಸರಳಾಯ, ನಳಿನಾಕ್ಷಿ ಸರಳಾಯ, ಕಮಲಾಕ್ಷಿ, ಶೋಭಾ ಶ್ರೀಪ್ರಕಾಶ್, ಲತಾ ಆರ್ ಕೆ, ಪದ್ಮಾ ಆರ್, ಅನನ್ಯಾ ಭಾರಿತ್ತಾಯ, ಪ್ರಮಿತಾ ಭಾರಿತ್ತಾಯ, ಪ್ರತಿಮಾ ಭಾರಿತ್ತಾಯ ಭಾಗವಹಿಸಿದ್ದರು. ಹಿಮ್ಮೇಳದಲ್ಲಿ ತಬಲಾವಾದನಲ್ಲಿ ಆದ್ಯಂತ್ ಅಡೂರು ಸಹಕರಿಸಿದ್ದರು. ಪ್ರಶಾಂತ ರಾಜ ವಿ ತಂತ್ರಿ ಸ್ವಾಗತಿಸಿ, ಅನಂತರಾಮ ಎಂ ವಂದಿಸಿದರು. ಸಂಘಟನೆಯ ಮುಂದಿನ ಮಾಸಿಕ ಸಭೆಯು ಅಕ್ಟೋಬರ್ 12ರಂದು ಬೆಳಗ್ಗೆ 10 ಗಂಟೆಗೆ ತಲ್ಪಚ್ಚೇರಿ ಸುಂದರ ಕಲ್ಲೂರಾಯರ ಮನೆಯಲ್ಲಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿದ್ಯಾರ್ಥಿ ವೇತನ : ಕೇರಳ ಉಡುಪಿ ಮಾಧ್ವ ಬ್ರಾಹ್ಮಣ ಸಭಾದ ಆಶ್ರಯದಲ್ಲಿ ರಾಜ್ಯ ಮಟ್ಟದಲ್ಲಿ ನೀಡುವ ವಿವಿಧ ಶೈಕ್ಷಣಿಕ ವಿದ್ಯಾರ್ಥಿ ವೇತನಗಳನ್ನು ಘೋಷಿಸಲಾಗಿದ್ದು, ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ಸದಸ್ಯ ವಿದ್ಯಾರ್ಥಿಗಳು ನಿಗದಿತ ಅರ್ಜಿ ಸಮೂನೆಯನ್ನು ಪಡೆದು, ಭರ್ತಿಗೊಳಿಸಿ, ಅಕ್ಟೋಬರ್ 12 ಮೊದಲು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ವಿದ್ಯಾರ್ಥಿ ವೇತನಗಳ ವಿವರಗಳನ್ನು ಮುಳ್ಳೇರಿಯ ವಲಯ ಶಿವಳ್ಳಿ ಬ್ರಾಹ್ಮಣ ಸಭಾದ ವಾಟ್ಸ್ಪ್ ಗ್ರೂಪ್ನಲ್ಲಿ ಪ್ರಕಟಿಸಲಾಗಿದ್ದು, ಸಮುದಾಯ ಬಾಂಧವರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9447490344ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.


