ಮಧೂರು: ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅ.21 ಸೋಮವಾರ ಬೆಳಿಗ್ಗೆ 10.30 ರ ಬಳಿಕದ ಶುಭಮುಹೂರ್ತದಲ್ಲಿ ಪ್ರಧಾನ ಗರ್ಭಗುಡಿಯ ದಾರಂದ ಪ್ರತಿಷ್ಠೆ ನಡೆಯಲಿದೆ.
ಶ್ರೀಮದ್ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ ಸಾನ್ನಿಧ್ಯ ಹಾಗು ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ದಿವ್ಯ ಹಸ್ತದಿಂದ ಈ ಪುಣ್ಯಕಾರ್ಯ ನೆರವೇರಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಭಕ್ತರು ಭಾಗವಹಿಸುವಂತೆ ವಿನಂತಿಸಲಾಗಿದೆ.


