ಬದಿಯಡ್ಕ: ನೀರ್ಚಾಲು ಸಮೀಪದ ಕಾರ್ಮಾರು ಶ್ರೀಮಹಾವಿಷ್ಣು ದೇವಾಲಯದಲ್ಲಿ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವಗಳ ಪೂರ್ವಭಾವಿಯಾಗಿ ಶ್ರೀಮಹಾವಿಷ್ಣು ದೇವರಿಗೆ ಅ.4 ರಂದು ಶುಕ್ರವಾರ ತುಳಸಿಯಿಂದ ಲಕ್ಷ ನಾಮಾರ್ಚನೆ ನಡೆಯಲಿದೆ.
1500 ವರ್ಷಗಳಷ್ಟು ಇತಿಹಾಸವಿರುವ ಶ್ರೀಕ್ಷೇತ್ರದ ಜೀರ್ಣೋದ್ದಾರ ಪ್ರಕ್ರಿಯೆಗಳು ನಡೆಯುತ್ತಿದ್ದು, ಪೂರ್ವಭಾವಿಯಾಗಿ ಆಯೋಜಿಸಿರುವ ತುಳಸಿ ಲಕ್ಷನಾಮಾರ್ಚನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಗವದ್ಬಕ್ತರು ಆಗಮಿಸಿ ಅರ್ಚನೆಯಲ್ಲಿ ಪಾಲ್ಗೊಳ್ಳಬೇಕೆಂದು ಕ್ಷೇತ್ರಾಡಳಿತ ಸಮಿತಿ ಪ್ರಕಟಣೆಯಲ್ಲಿ ವಿನಂತಿಸಿದೆ.